ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸತ್ಯ ಹಾಗೂ ಪ್ರಾಮಾಣಿಕತೆಗೆ ಕೊನೆಗೂ ಗೆಲುವು – ಕೆ.ಆರ್. ದೇವರಾಜು

ತುಮಕೂರು/ತಿಪಟೂರು – ತಾಲೂಕಿನ ಕರಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮೂರನೇ ವರ್ಷದ ಸರ್ವ ಸದಸ್ಯರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಕೆ ಆರ್ ದೇವರಾಜು ರವರು ನಮ್ಮ ಸಂಘವನ್ನು ಪ್ರಾರಂಭಿಸಲು ಹಲವಾರು ವರ್ಷಗಳಿಂದ ಪ್ರಯತ್ನಿಸುತ್ತಿದ್ದು, ಕೆಲವು ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದ ಸಾಧ್ಯವಾಗಿರಲಿಲ್ಲ. ಆದರೆ ಸಹಕಾರ ಸಚಿವರಾದ ಕೆಎನ್ ರಾಜಣ್ಣನವರು ಮಾಜಿ ಸಚಿವರಾದ ಜೆ ಸಿ ಮಾಧುಸ್ವಾಮಿ ,ಬಿ ಸಿ ನಾಗೇಶ್ ರವರ ಸಹಕಾರದೊಂದಿಗೆ ಸಂಘವನ್ನು ಪ್ರಾರಂಭಿಸಿದ್ದು, ಇಂದು ಸಣ್ಣದಾಗಿ ಪ್ರಾರಂಭಿಸಿರುವ ಸಂಘವನ್ನು ಮುಂದೆ ಹೆಮ್ಮರವಾಗಿ ಬೆಳೆಸಬೇಕೆಂದು ಸದಸ್ಯರಿಗೆ ಕರೆ ನೀಡಿದರು. ಕೆಲವು ದುಷ್ಟರು ಎಷ್ಟೇ ಪ್ರಯತ್ನಿಸಿದರೂ ಅಂತಿಮವಾಗಿ ಸತ್ಯಕ್ಕೆ ಗೆಲುವು ಎಂಬಂತೆ ನಮ್ಮ ಸಂಘವನ್ನು ಪ್ರಾರಂಭಿಸಲು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.ರೈತರು ಖಾಸಗಿ ಡೈರಿಗಳಿಗೆ ಬಲಿಯಾಗದೆ ನಂದಿನಿ ಡೈರಿಗಳಿಗೆ ಉತ್ತಮ ಗುಣಮಟ್ಟದ ಹಾಲು ಸರಬರಾಜು ಮಾಡಿ ಹೆಚ್ಚಿನ ದರ ಪಡೆಯಬೇಕೆಂದು ತಿಳಿಸಿದರು.
ಸಭೆಯಲ್ಲಿ ಅತಿಥಿಗಳಾಗಿ ಕರಡಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಿ ಇ ಓ ಮನು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾದ ಕೆ ಜಿ ರಂಗಸ್ವಾಮಿ ದಯಾನಂದ ಸ್ವಾಮಿ ಉಮೇಶ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕಿರಣ್ ಹಾಲು ಪರೀಕ್ಷೆ ಕ ಮಲ್ಲಿಕಾರ್ಜುನಯ್ಯ ಸೇರಿದಂತೆ ಸದಸ್ಯರು ಹಾಗೂ ಹಾಲು ಉತ್ಪಾದಕರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ