ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅವಳಿ ನಗರಗಳ ನೂತನ ಬಸ್ ನಿಲ್ದಾಣಗಳನ್ನು ಲೋಕಾರ್ಪಣೆ ಮಾಡಿದ ಸಾರಿಗೆ ಸಚಿವ ಶ್ರೀ ರಾಮಲಿಂಗಾರೆಡ್ಡಿ

ಬಾಗಲಕೋಟೆ ಜಿಲ್ಲೆಯ ಅವಳಿ ನಗರಗಳು ಎಂದು ಖ್ಯಾತಿ ಪಡೆದ ರಬಕವಿ ಬನಹಟ್ಟಿ ನಗರಗಳಲ್ಲಿ ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣಗಳನ್ನು ಸಾರಿಗೆ ಸಚಿವ ಶ್ರೀ ರಾಮಲಿಂಗಾರೆಡ್ಡಿ ಅವರು ರಿಬ್ಬನ್ ಕಟ್ ಮಾಡುವುದರ ಮೂಲಕ ಲೋಕಾರ್ಪಣೆ ಮಾಡಿದರು.
ಈ ಅವಳಿ ನಗರಗಳ ಬಸ್ ನಿಲ್ದಾಣಗಳು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಾಗಲಕೋಟೆ ಭಾಗದ ರಬಕವಿ ಹಾಗೂ ಬನಹಟ್ಟಿ ಬಸ್ ನಿಲ್ದಾಣಗಳನ್ನು ತಲಾ 1 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ತೇರದಾಳ ಮತ ಕ್ಷೇತ್ರದ ಶಾಸಕ ಸಿದ್ದು ಸವದಿ ಈ ಅವಳಿ ನಗರಗಳಲ್ಲಿ ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣಗಳಿಗೆ ಕಂಪೌಂಡು ಗೋಡೆ ,ಶುದ್ಧ ಕುಡಿಯುವ ನೀರು, ಸುಸಜ್ಜಿತ ಶೌಚಾಲಯಗಳನ್ನು ನಿರ್ಮಾಣ ಮಾಡಲಿಕ್ಕೆ ತಲಾ ನಿಲ್ದಾಣಕ್ಕೆ 75 ಲಕ್ಷ ದಂತೆ ಎರಡು ನಿಲ್ದಾಣಗಳಿಗೆ ಒಂದೂವರೆ ಒಟ್ಟು 1 ಕೋಟಿ 50 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಬೇಕು ಹಾಗೂ ನಮ್ಮ ಕ್ಷೇತ್ರದಿಂದ ಎರಡು ಪಲ್ಲಕ್ಕಿ ಬಸ್ ಗಳು ಎರಡು ಎ.ಸಿ ಬಸ್ ಗಳು ನೀಡಬೇಕು ಎಂದು ಸಾರಿಗೆ ಸಚಿವರಲ್ಲಿ ಮನವಿ ಮಾಡಿದರು.
ಬಳಿಕ ಮಾತನಾಡಿದ ಸಾರಿಗೆ ಸಚಿವ ಶ್ರೀರಾಮಲಿಂಗಾ ರೆಡ್ಡಿ ಅವರು ಈ ಭಾಗದಿಂದ ಪಲ್ಲಕ್ಕಿ ಬಸ್, ಎಸಿ ಬಸ್ ಗಳಾಗಲೀ ವಾಯುವ್ಯ ರಸ್ತೆ ಸಾರಿಗೆ ಅಥವಾ ಕೆ ಎಸ್ ಆರ್ ಟಿಸಿ ಸಂಸ್ಥೆಯ ಮೂಲಕ ಈ ಬಸ್ ಗಳನ್ನು ಕ್ಷೇತ್ರದ ಸಾರ್ವಜನಿಕರಿಗೆ ಸೌಕರ್ಯ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಬಕಾರಿ ಸಚಿವ ಆರ್ ಬಿ ತಿಮ್ಮಪೂರ,ಕೆ.ಎಸ್.ಆರ್.ಟಿ.ಸಿ ನಿಗಮ ಮಂಡಳಿ ಅಧ್ಯಕ್ಷ ಪರಂಗೌಡ್ ಕಾಗೆ ,ಉಪಾಧ್ಯಕ್ಷ ಗದಗದ ಪೀರ್ ಸಾಬ್ ,ನಗರಸಭೆ ಅಧ್ಯಕ್ಷ ವಿದ್ಯಾ ದವಾಡಿ, ನಾಡಗೋಡ್ ಪಾಟೀಲ್ ,ಸಿದ್ದು ಕೊಣ್ಣುರ್, ಚಿದಾನಂದ್ ತೆಗ್ಗಿ, ಮಾಮುನ್ ರಶೀದ್ ಪಾರತನ ಹಳ್ಳಿ, ಅಬೂಬಕ್ಕರ್ ಜಮಖಂಡಿ ,ಮಹಾಲಿಂಗಪುರ ಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ್ ,ತೇರದಾಳ ಪುರಸಭೆ ಅಧ್ಯಕ್ಷರು ಇನ್ನೂ ಅನೇಕ ನಗರಸಭೆ ಸದಸ್ಯರುಗಳು ,ಮುಖಂಡರುಗಳು ಉಪಸ್ಥಿತರಿದ್ದರು.

ವರದಿ-ಮೆಹಬೂಬ್ ಬಾರಿಗಡ್ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ