ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮ.ಮ.ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ,ದಸರಾ,ದೀಪಾವಳಿ ವಿಶೇಷ ಜಾತ್ರಾ ನಿಮಿತ್ತ ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳ ಜೊತೆ ಸಭೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ದಸರಾ ಹಾಗೂ ದೀಪಾವಳಿ ಜಾತ್ರಾ ವಿಶೇಷ ಪ್ರಯುಕ್ತ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆದ ಸಭೆಯಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಹದೇಶ್ವರನ ದರ್ಶನ ಪಡೆದು ನಾಗಮಲೆ ಭವನದಲ್ಲಿ ಅಧಿಕಾರಿಗಳ ಸಭೆ.
ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಜಾತ್ರಾ ವಿಶೇಷ ಮಹೋತ್ಸವ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ನಂತರ ಮಾತನಾಡಿದರು.

ಆರಾಧ್ಯ ದೈವ ಮಲೆ ಮಹದೇಶ್ವರನ ಬೆಟ್ಟಕ್ಕೆ ರಾಜ್ಯದ ಹಾಗೂ ವಿವಿಧ ಜಿಲ್ಲೆಗಳ ಮತ್ತು ತಮಿಳುನಾಡಿನಿಂದಲೂ ಲಕ್ಷಾಂತರ ಭಕ್ತರು ಧಾರ್ಮಿಕ ಕ್ಷೇತ್ರಕ್ಕೆ ಬಂದು ಹೋಗುವ ಮಾದಪ್ಪನ ಭಕ್ತಾದಿಗಳಿಗೆ ಯಾವುದೇ ಲೋಪದೋಷಗಳು ಬರದಂತೆ ಅಧಿಕಾರಿಗಳು ಸಕಲ ಸೌಕರ್ಯಗಳನ್ನು ನೀಡುವ ಮೂಲಕ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ದಾಸೋಹ ವ್ಯವಸ್ಥೆ: ಜಾತ್ರಾ ಹಾಗೂ ಹಬ್ಬದ ವಿಶೇಷ ದಿನಗಳಲ್ಲಿ ಮಲೆ ಮಹದೇಶ್ವರನ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬಂದು ಹೋಗುವ ಈ ಧಾರ್ಮಿಕ ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆಯನ್ನು ಗುಣಮಟ್ಟದಿಂದ ನೀಡುವಂತೆ ಜೊತೆಗೆ ಸ್ವಚ್ಛತೆಗೂ ಸಹ ಆದ್ಯತೆ ನೀಡುವಂತೆ ಸಲಹೆ ನೀಡಿದರು, ಭಕ್ತಾದಿಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆ ದೂರದಂತೆ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.

ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ:
ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ವಿಶೇಷ ದೇವರ ದರ್ಶನ ಸೌಲಭ್ಯ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಲಕ್ಷಾಂತರ ಭಕ್ತರು ಬಂದು ಹೋಗುವ ಈ ಧಾರ್ಮಿಕ ಕ್ಷೇತ್ರದಲ್ಲಿ ಬರುವಂತಹ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಸಹ ಕಲ್ಪಿಸುವ ಮೂಲಕ ಕ್ರಮ ಕೈಗೊಳ್ಳಬೇಕು ಜೊತೆಗೆ ಆರಕ್ಷಕ ಠಾಣೆಯ ಮುಂಭಾಗ ರಸ್ತೆಯಲ್ಲಿ ಗಣ್ಯ ವ್ಯಕ್ತಿಗಳ ವಾಹನ ಪಾರ್ಕಿಂಗ್ ಸೌಲಭ್ಯ ವ್ಯವಸ್ಥೆ ಕಲ್ಪಿಸಬೇಕು ತಮಿಳುನಾಡಿನಿಂದ ಬರುವ ಸಾರಿಗೆ ವಾಹನಗಳನ್ನು ಪಾಲಾರ್ ರಸ್ತೆಯಲ್ಲಿರುವ ಪಾರ್ಕಿಂಗ್ ಮೈದಾನದಲ್ಲಿ ಸೌಲಭ್ಯ ಕಲ್ಪಿಸಿ ವ್ಯವಸ್ಥ ಕಲ್ಪಿಸಿ ಭಕ್ತಾದಿಗಳಿಗೆ ಲಘು ವಾ ಹನಗಳಿಗೆ ಆಸ್ಪತ್ರೆ ಮುಂಭಾಗದಲ್ಲಿರುವ ಖಾಲಿ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.

ಸಾರಿಗೆ ವ್ಯವಸ್ಥೆ ಕಲ್ಪಿಸಿ :
ಮಲೆ ಮಾದೇಶ್ವರನ ಬೆಟ್ಟಕ್ಕೆ ರಾಜ್ಯದ ನಾನಾ ಭಾಗಗಳಿಂದ ಬರುವ ಭಕ್ತಾದಿಗಳಿಗೆ ಕರ್ನಾಟಕ ರಾಜ್ಯ ಸಾರಿಗೆ ಹೆಚ್ಚುವರಿ ಬಸ್ ಗಳನ್ನು ಹನೂರು ತಾಲೂಕು ಹಾಗೂ ಕೊಳ್ಳೇಗಾಲ ಗುಂಡ್ಲುಪೇಟೆ, ಮೈಸೂರು ವಿಭಾಗದಿಂದ ಹೆಚ್ಚುವರಿಯಾಗಿ ಬಸ್ ಗಳನ್ನು ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು ಆರೋಗ್ಯ ಇಲಾಖೆ ಸಹ ಹೆಚ್ಚುವರಿ ಆಂಬುಲೆಸನ್ ಗಳ ವ್ಯವಸ್ಥೆ ಕಲ್ಪಿಸಿ ಜಾತ್ರೆಯ ಸಂದರ್ಭದಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ಕಲ್ಪಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು

ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆದ್ಯತೆ ನೀಡಿ :
ಮಲೆ ಮಹದೇಶ್ವರ ಬೆಟ್ಟದಲ್ಲಿ ಬರುವ ಭಕ್ತಾದಿಗಳಿಗೆ ರಂಗಮಂದಿರ ಹವಾಮಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜಾನಪದ ನೃತ್ಯ ರೂಪಕಗಳ ನಾಟಕ ಮತ್ತು ಇತ್ಯಾದಿ ಸಾಂಸ್ಕೃತಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ವಿಶೇಷ ವ್ಯವಸ್ಥೆ ಕಲ್ಪಿಸಬೇಕು ಬರುವಂತ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ಸಕಲ ರೀತಿಯಲ್ಲಿಯೂ ಸೂಕ್ತ ಬಂದೋಬಸ್ತ್ ಕಲ್ಪಿಸುವ ಮೂಲಕ ಕ್ರಮ ಕೈಗೊಳ್ಳಬೇಕು ಜೊತೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಮಹಾಲಯ ಅಮಾವಾಸ್ಯೆ ದಸರಾ ಹಾಗೂ ದೀಪಾವಳಿ ಹಬ್ಬದ ಜಾತ್ರಾ ವಿಶೇಷ ದಿನಗಳಲ್ಲಿ ಭಕ್ತಾದಿಗಳಿಗೆ ಯಾವುದೇ ಲೋಪದೋಷಗಳು ಬರದಂತೆ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಸಕಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಪ್ರಾಧಿಕಾರದ ವತಿಯಿಂದ ನಡೆಯುವತ್ತಿರುವ ಅಬಿವೃದ್ಧಿ ಕಾಮಗರಿಗಳಾದ ದೀಪದಗಿರಿ ಒಡ್ಡಿನಿಂದ ನಡೆಯುತ್ತಿರುವ ಪೆವರ್ಸ್ ಗಳನ್ನೂ ಸಹ ಪರಿಶೀಲನೆ ನಡೆಸಿ ಗುಣಮಟ್ಟದ ನಿರ್ಮಿಸುವಂತೆ ಸೂಚಿಸಿದರು ಅದಲ್ಲದೆ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಯಾದ 508 ಕೊಠಡಿ ಕಾಮಗಾರಿಯನ್ನು ಶಾಸಕರು ಪರಿಶೀಲನೆ ನಡೆಸಿ ಗುಣಮಟ್ಟದ ಪೀಠೋಪಕರಣಗಳನ್ನು ಅಳವಡಿಸಲು ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಇನ್ಸ್ಪೆಕ್ಟರ್ ಜಗದೀಶ್,ಸಬ್ ಇನ್ಸ್ಪೆಕ್ಟರ್ ಬಸವರಾಜು,ಲೋಕೋಪಯೋಗಿ ಇಲಾಖೆ ಎ.ಇ.ಇ  ಚಿನ್ನನ್ ,ವೈದ್ಯಾಧಿಕಾರಿ  ಜಾನವಿ,ಗ್ರಾಂ ಪಂ ಅಬಿವೃದ್ಧಿ ಅಧಿಕಾರಿ ಕಿರಣ್ ಕುಮಾರ್ ,ಚೆಸ್ಕಾಂ ಜೆ ಇ ಮಹೇಶ್,ಕೆಎಸ್ಆರ್ಟಿಸಿ ಟಿಸಿ ಚಿನ್ನಪ್ಪ,ತಂಬಡಿ ನಾಗರಾಜ್,ನಾಗಣ್ಣ,ಮಹದೇವಸ್ವಾಮಿ,ಜನಾರ್ಧನ,ಮಾದೇಶ್ ಹಾಗೂ ಪ್ರಾಧಿಕಾರದ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ