ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದಲ್ಲಿ ಮುಖ್ಯ ವೈದ್ಯಾಧಿಕಾರಿಗಳಿಲ್ಲದೆ ಅನಾಥವಾದ ಪ್ರಾಥಮಿಕ ಆರೋಗ್ಯ ಕೇಂದ್ರ.
ಈ ಆಸ್ಪತ್ರೆಗೆ ಪ್ರಥಮ ದರ್ಜೆ ಸಹಾಯಕರಾದ ಶ್ರೀ ಸತ್ಯ ವೀರ ಕೊಡಬಾಗಿ ಅವರು ತಮ್ಮನ್ನು ತಾವೇ ಸರ್ವಾಧಿಕಾರಿ ಎಂದುಕೊಂಡು,ಸಮಯ ಪರಿಪಾಲನೆ ಎಂದರೆ ಏನೆಂದು ತಿಳಿಯದ ಇವರು ಕರ್ತವ್ಯ ನಿರತರಾಗಿದ್ದಾಗಲೂ, ಮದ್ಯಪಾನ ಸೇವನೆ ಮಾಡಿ ಆಸ್ಪತ್ರೆಗೆ ಬರುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಸ್ಥಳೀಯರು ಎಚ್ಚರಿಕೆ ನೀಡುತ್ತಿದ್ದರೂ ಸಹ ಯಾವುದನ್ನೂ ಲೆಕ್ಕಿಸದೆ ಈ ಬಗ್ಗೆ ಪ್ರಶ್ನೆ ಮಾಡಿದವರಿಗೆ ಮರು ಪ್ರಶ್ನೆ ಮಾಡುವ ಮೂಲಕ ಕಾಲ ಹರಣ ಮಾಡುವ ಇವರ ವಿರುದ್ಧ ಇಲಾಖೆಯ ಅಧಿಕಾರಿಗಳು ಸೂಕ್ತ ತನಿಖೆ ನಡೆಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ನಾಮಿಕಾವಸ್ಥೆಗೆ ಕೊಟ್ಟ ರಜಾ ಪತ್ರ:
ಹಲಕುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶಿಲ್ಪಾ ಬೆನಕನವಾರಿ ಅವರ ರಜೆಯ ಪತ್ರ ಹೆಸರಿಗೆ ಮಾತ್ರ ಸೀಮಿತವಾಗಿದ್ದು, ರಜೆಯಲ್ಲಿದ್ದಾಗಲೂ ಹಾಜರಿ ಪುಸ್ತಕದಲ್ಲಿ ಸಹಿ ಮಾಡಿರುತ್ತಾರೆ.
ಶೀಘ್ರದಲ್ಲೇ ತಾಲ್ಲೂಕು ವೈದ್ಯಾಧಿಕಾರಿಗಳು ಈ ಆಸ್ಪತ್ರೆಗೆ ಭೇಟಿ ನೀಡಿ ಮುಖ್ಯ ವೈದ್ಯಾಧಿಕಾರಿಗಳನ್ನು ನೇಮಿಸುವ ಮೂಲಕ ಇಲ್ಲಿನ ಸಮಸ್ಯೆಗಳಿಗೆ ಪರಿಹಾರ ನೀಡುತ್ತಾರೆ ಎನ್ನುವುದು ನಮ್ಮ ಆಶಯ.
ವರದಿ: ಪರಶುರಾಮ ಬಂಡಿ




















