ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಪರಾಧ ತಡೆ ಮಾಸಾಚಾರಣೆ ಹಾಗೂ ಸಂಚಾರ ನಿಯಮಗಳ ಪಾಲನೆ ಕಾರ್ಯಕ್ರಮ

ಯಾದಗಿರಿ: ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕೋರ ಗ್ರೀನ್ ಸಕ್ಕರೆ ಕಾರ್ಖಾನೆ ಯಲ್ಲಿ ವಡಗೇರಾ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚಾರಣೆ ಹಾಗೂ ಸಂಚಾರ ನಿಯಮಗಳ ಪಾಲನೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಾರ್ಖಾನೆಯ ಎಲ್ಲಾ ಕಬ್ಬಿನ ಲಾರಿ ಚಾಲಕರಿಗೆ / ವಾಹನ ಮಾಲಿಕರಿಗೆ ಹಾಗೂ ಸಿಬ್ಬಂದಿಯವರಿಗೆ ಸಂಚಾರ ನಿಯಮಗಳ ಕುರಿತು‌ ಈ ಕೆಳಕಂಡ ಅಂಶಗಳನ್ನು ತಿಳಿಸಲಾಯಿತು.

1) ವಾಹನ ಚಾಲಕರು ಕಡ್ಡಾಯವಾಗಿ ಪರವಾನಿಗೆ, ವಿಮೆ, ಫಿಟ್ನೆಸ್ ಹೊಂದಿರಬೇಕು
2) ವಾಹನದ ಎರಡು ಬದಿಯಲ್ಲಿ ರೇಡಿಯಂ ಕಡ್ಡಾಯವಾಗಿ ಹಾಕಿಕೊಳ್ಳಬೇಕು
3) ERSS 112 ವಾಹನವನ್ನು ಸದ್ಬಳಕೆ ಮಾಡಿಕೊಳ್ಳುವುದು
4) Cyber crime ಅಪರಾಧ ಕುರಿತು ಜಾಗೃತಿ ಮೂಡಿಸಲಾಯಿತು.
5) ಸಂಶಯಾಸ್ಪದ ವ್ಯಕ್ತಿ ಗಳು ಕಂಡು ಬಂದರೆ ಮಾಹಿತಿ ತಿಳಿಸುವುದು.. ಇತ್ಯಾದಿ.

ಈ ಸಮಯದಲ್ಲಿ ಮಾನ್ಯ ಅರುಣಕುಮಾರ ಜಿ. ಕೊಳ್ಳುರ DSP ಯಾದಗಿರಿ, ಸುನಿಲ ಮೂಲಿಮನಿ CPI Town ಯಾದಗಿರಿ, ಮೆಹಬೂಬ ಅಲಿ PSI ವಡಿಗೇರ ಠಾಣೆ, ಜಗದೀಶ ಪೋಲಿಸ್ ಹಾಗೂ ಸಿದ್ದು ಮುನಮುಟ್ಟಗಿ ಸಕ್ಕರೆ ಕಾರ್ಖಾನೆಯ ಅಧಿಕಾರಿ ಸಿಬ್ಬಂದಿಯವರು ಹಾಜರಿದ್ದರು.

ವರದಿ: ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ