ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಮಾನುಜ ರಸ್ತೆಯ ಅಭಿವೃದ್ಧಿ ಕಾರ್ಯ ಆರಂಭ : ತೇಜಸ್ವಿ ನಾಗಲಿಂಗ ಸ್ವಾಮಿ ಹೋರಾಟಕ್ಕೆ ಸಿಕ್ಕ ಪ್ರತಿಫಲ

ಮೈಸೂರು : ವರ್ಷಗಳಿಂದ ಅಭಿವೃದ್ಧಿ ಕಾಣದೆ ವಂಚಿತವಾಗಿದ್ದ ರಾಮಾನುಜ ರಸ್ತೆಯ 9 ನೇ ತಿರುವಿನಿಂದ ಕಂಸಾಳೆ ಮಹದೇವಯ್ಯ ವೃತ್ತದವರೆಗೆ ಕಡೆಗೂ ಅಭಿವೃದ್ಧಿ ‌ಭಾಗ್ಯ ಒದಗಿ ಬಂದಿದ್ದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಯವರ ಹೋರಾಟಕ್ಕೆ ಸಿಕ್ಕ ಪ್ರತಿಫಲವಾಗಿದೆ.

ಈ ಭಾಗದ ರಸ್ತೆಗೆ ಡಾಂಬರೀಕರಣ ಆಗದೆ ಸ್ಥಳೀಯ ನಿವಾಸಿಗಳಿಗೆ ಮತ್ತು ವ್ಯಾಪಾರಿಗಳಿಗೆ ತೊಂದರೆ ಉಂಟಾಗುತ್ತಿರುವದನ್ನು ಗಮನಿಸಿ ಸ್ಥಳೀಯ ನಿವಾಸಿಗಳ ದೂರಿನ ಮೇರೆಗೆ ಕಳೆದ ನವೆಂಬರ್ 1 ರಂದು ರಾಮಾನುಜ ರಸ್ತೆಯ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಧರಣಿ ಸತ್ಯಾಗ್ರಹ ನಡೆಸಿದ್ದರು.

ನಂತರ ಮೈಸೂರು ಮಹಾ ನಗರ ಪಾಲಿಕೆಯ ಆಯುಕ್ತರಿಗೆ ಕೂಡಲೇ ರಸ್ತೆ ದುರಸ್ತಿ ಕಾರ್ಯ ಆರಂಭಿಸುವಂತೆ ತೇಜಸ್ವಿ ಮನವಿ ಸಲ್ಲಿಸಿದರು.

ಅದರ ಪರಿಣಾಮವಾಗಿ ಇಂದು ಕೃಷ್ಣ ರಾಜ ಕ್ಷೇತ್ರದ ಶಾಸಕರಾದ ಶ್ರೀ ವತ್ಸ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ರಾಮಾನುಜ ರಸ್ತೆಯ 9ನೇ ತಿರುವಿನಿಂದ ಕಂಸಾಳೆ ಮಹದೇವಯ್ಯ ವೃತ್ತದ ವರೆಗಿನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ.
ಶಾಸಕರಾದ ಶ್ರೀ ವತ್ಸ ಅವರು ವಿಳಂಬವಾದರೂ ಸಹ ರಾಮನುಜ ರಸ್ತೆಯ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿರುವುದನ್ನು ತೇಜಸ್ವಿ ನಾಗಲಿಂಗ ಸ್ವಾಮಿ ಸ್ವಾಗತಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ