ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಂದ್ ಗೆ ಬೆಂಬಲಿಸಿ ಅಂಬೇಡ್ಕರ ಸೇನೆ ಪ್ರತಿಭಟನೆ: ಅಮಿತ್ ಶಾ ರಾಜೀನಾಮೆಗೆ ಒತ್ತಾಯ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ, ಅಂಬೇಡ್ಕರ ಸೇನೆಯ ಜಿಲ್ಲಾಧ್ಯಕ್ಷರಾದ ಶ್ರೀಧರ (ಗೌತಮ) ಪುಟಗೆ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಬಂದ್ ಗೆ ಬೆಂಬಲಿಸಿ ಪ್ರತಿಭಟಿಸಿದರು.
ನಂತರ ಅಂಬೇಡ್ಕರ ಸೇನೆಯ ಕಾರ್ಯಕರ್ತರು ಮಾತನಾಡಿ, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಬಾಬಾ ಸಾಹೇಬರು ಬರೆದಿರುವ ಸಂವಿಧಾನದಡಿಯಲ್ಲಿ ಕೇಂದ್ರ ಗೃಹ ಸಚಿವರಾಗಿದ್ದು ಅಂಬೇಡ್ಕರವರ ಬಗ್ಗೆ ಅವಮಾನ ಮಾಡಿದ್ದನ್ನು ನಮ್ಮ ಅಂಬೇಡ್ಕರ ಸೇನೆ ಉಗ್ರವಾಗಿ ಖಂಡಿಸುತ್ತದೆ ಎಂದರು. ಸಂವಿಧಾನದಡಿಯಲ್ಲಿ ಒಂದು ದೇಶದ ಉನ್ನತ ಹುದ್ದೆ ದೊರಕಿದ್ದು ಯಾವ ದೇವರ ದೆಯೆಯಿಂದಲ್ಲಿ ದೇವರ ನಾಮಸ್ಮರಣೆ ಮಾಡಿದರೆ 7 ಜನ್ಮದಲ್ಲಿ ಸ್ವರ್ಗ ಸಿಗುತ್ತದೆ ಎನ್ನುವ ಗೃಹ ಸಚಿವರು, ಅಂಬೇಡ್ಕರವರ ನಾಮ ಸ್ಮರಣೆಯಿಂದಲೇ ಇದೇ ಜನ್ಮದಲ್ಲಿ ಸ್ವರ್ಗ ಸಿಕ್ಕಿರುವುದನ್ನು ಅರ್ಥ ಮಾಡಿಕೊಳ್ಳಬೇಕು. ನೀವು ನಿಮ್ಮ ಪ್ರಧಾನಿ ಚಹಾ ಮತ್ತು ವ್ಯಾಪಾರ ಮಾಡುವವರಿಗೆ ಉನ್ನತ ಹುದ್ದೆ ಕೊಟ್ಟಿರುವದು ಸಂವಿಧಾನ ಅನ್ನುವುದು ತಿಳಿದಿರುವ ಸಂಗತಿ ಎಂದರು. ಕೇಂದ್ರ ಗೃಹಮಂತ್ರಿ ಅಮಿತ್ ಶಾ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಇಲ್ಲವಾದಲ್ಲಿ ದೇಶಾದ್ಯಂತ ಉಗ್ರವಾದ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಅವರು ಮನವಿ ಪತ್ರದಲ್ಲಿ ಎಚ್ಚರಿಕೆ ನೀಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ