ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಲಬುರಗಿ : ಬಿಜೆಪಿ ಮುಖಂಡರ ಹತ್ಯೆಗೆ ಸಂಚು ರೂಪಿಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ

ಕಲಬುರಗಿ : ಆಂದೋಲಾ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ಮೂವರು ಬಿಜೆಪಿ ನಾಯಕರ ಹತ್ಯೆಗೆ ಸಂಚು ರೂಪಿಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ, ನಗರದ ಜಗತ್ ವೃತ್ತದಲ್ಲಿ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಸರಕಾರದ ಕುಮ್ಮಕ್ಕಿನಿಂದ ಆರೋಪಿಗಳು ಬಚಾವಾಗುತ್ತಿದ್ದಾರೆ, ಅವರನ್ನು ರಕ್ಷಿಸುವ ಭರದಲ್ಲಿ ಉಸ್ತುವಾರಿ ಸಚಿವರು ಪ್ರಕರಣಗಳನ್ನು ದಾಖಲಿಸದಂತೆ ಪೊಲೀಸರಿಗೆ ಸೂಚನೆಗಳು ನೀಡುತ್ತಿದ್ದಾರೆಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಶಾಸಕ ರಾಜಕುಮಾ‌ರ್ ಪಾಟೀಲ್ ತೆಲ್ಕೂರ್, ‘ಆತ್ಮಹತ್ಯೆಗೆ ಶರಣಾದ ಸಚಿನ್ ಪಂಚಾಳ ಅವರ ಕುಟುಂಬ ಮಾನಸಿಕವಾಗಿ ಕುಂದಿದೆ, ತಾವು ಸಹ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾರೆ. ಅವರ ಕುಟುಂಬಕ್ಕೆ ಪರಿಹಾರವಾಗಿ 1 ಕೋಟಿ ರೂ. ಘೋಷಣೆ ಮಾಡಬೇಕು’ ಎಂದು ಆಗ್ರಹಿಸಿದರು.
‘ಬೀದ‌ರ್ ಜಿಲ್ಲಾಡಳಿತ ಮತ್ತು ಕಾಂಗ್ರೆಸ್ ಸರಕಾರ ಆತ್ಮಹತ್ಯೆಗೆ ಶರಣಾದ ಸಚಿನ್ ಕುಟುಂಬಕ್ಕೆ ಸಾಂತ್ವನ ಕೂಡ ಹೇಳಿಲ್ಲ, ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕು,ಆತನ ಸಾವಿಗೆ ಕಾರಣರಾದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು’ ಎಂದು ಒತ್ತಾಯಿಸಿದರು.
‘ಆಂದೋಲಾ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಬಿಜೆಪಿ ಶಾಸಕ ಬಸವರಾಜ ಮತ್ತಿಮಡು, ಚಂದು ಪಾಟೀಲ್ ಮತ್ತು ಮಣಿಕಂಠ ರಾಠೋಡ್ ಹತ್ಯೆಗೆ ಸಂಚು ರೂಪಿಸಿರುವ ಆರೋಪಿಗಳನ್ನು ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಬಸವರಾಜ ಮತ್ತಿಮಡು, ಕಲಬುರಗಿ ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್‌, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್‌ ರೇವೂ‌ರ್, ಅಮರನಾಥ್ ಪಾಟೀಲ್, ಶಿವರಾಜ್ ಪಾಟೀಲ್ ರದ್ದೇವಾಡಗಿ, ರಾಜು ದೇವದುರ್ಗ, ವಿಶಾಲ ದರ್ಗಿ, ಅಪ್ಪು ಕಣಕಿ, ಸುಶೀಲ ಚವ್ಹಾಣ, ಭಾಗೀರಥಿ ಗುಣಪುರ, ಸಂತೋಷ್ ಹಾದಿಮನಿ, ಶಿವಕಾಂತ್ ಮಹಾಜನ್, ಮಲ್ಲಿಕಾರ್ಜುನ ಮರತೂರಕರ್, ರಾಮಚಂದ್ರ ಜಾಧವ್, ಶಿವ ಅಷ್ಟಗಿ, ಮಹಾದೇವ ಬೆಳಮಗಿ, ಗೋಪಾಲ್ ಚವ್ಹಾಣ ಸೇರಿದಂತೆ ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ