ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಲಿತ ಸಚಿವರನ್ನು ಟಾರ್ಗೆಟ್ ಮಾಡುತ್ತಿರುವ ಬಿಜೆಪಿ: ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ನೀಲೂರ

ಕಲಬುರಗಿ: ಸಚಿನ್‌ ಪಾಂಚಾಳ ಅವರ ಆತ್ಮಹತ್ಯೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ರವರ ಹೆಸರನ್ನು ಅನ್ಯತಾ ಎಳೆಯಲಾಗುತ್ತಿದೆ. ಸಚಿನ್ ರವರ ಡೆತ್ ನೋಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಕೂಡಾ ಇಲ್ಲ. ಆದರೂ ಕೂಡಾ ಬಿಜೆಪಿಯವರು ಪ್ರಿಯಾಂಕ ಖರ್ಗೆರವರನ್ನು ರಾಜೀನಾಮೆ ಕೇಳುತ್ತಿರುವುದು ಯಾವ ಪುರುಷಾರ್ಥಕ್ಕೆ ಎನ್ನುವುದು ಗೊತ್ತಾಗುತ್ತಿಲ್ಲ ಎಂದು ಕಾಂಗ್ರೆಸ್ ಎಸ್ ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ನೀಲೂರ ಅವರು ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು,
ಸಚಿನ್ ಪಾಂಚಾಳ ಡೆತ್ ನೋಟ್ ನಲ್ಲಿ ಕೆಲವರ ಹೆಸರನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿದ್ದ ವ್ಯಕ್ತಿ ಸಚಿವರ ಆಪ್ತರಾದ ರಾಜು ಕಪನೂರ ಎನ್ನುವ ಕಾರಣಕ್ಕೆ ಸಚಿವರು ರಾಜೀನಾಮೆ ಕೊಡಬೇಕಾ?. ಬಿಜೆಪಿಯವರಿಗೆ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದರು. ಪ್ರತಿಯೊಂದು ವಿಷಯಗಳಿಗೂ ರಾಜೀನಾಮೆ ಕೊಡಬೇಕು ಎಂದು ಹೇಳುತ್ತಿರುವ ಬಿಜೆಪಿಯವರಿಗೆ ಯಾವ ನೈತಿಕತೆ ಇಲ್ಲ ಎಂದರು. ಸಚಿವ ಪ್ರಿಯಾಂಕ ಖರ್ಗೆರವರು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸುವಂತೆ ಗೃಹ ಸಚಿವರಿಗೆ ತಿಳಿಸಿದ್ದಾರೆ. ತನಿಖೆಯ ನಂತರ ಸತ್ಯಾಂಶ ಹೊರ ಬರಲಿದೆ. ಈಗಾಗಲೇ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿಯೇ ಅಭಿವೃದ್ಧಿ ಕೆಲಸವನ್ನು ಮಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸರಕಾರ ರಾಜ್ಯದಲ್ಲಿ ಅಭಿವೃದ್ಧಿ ಪರ ಕೆಲಸ ಮಾಡುತ್ತಿದೆ. ಅದನ್ನು ಸಹಿಸಿಕೊಳ್ಳದ ಬಿಜೆಪಿಯವರು ವೃತಾ ಟೀಕೆ ಮಾಡುತ್ತಿದ್ದಾರೆ. ಇದನ್ನು ಸಹಿಸುವುದಿಲ್ಲ. ಬಿಜೆಪಿಯವರು ವೃತಾ ಪ್ರತಿಭಟನೆ ಮಾಡಿದರೆ ನಾವು ಕೂಡಾ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ