ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೀ ಕನ್ನಡ ರೈಟರ್ಸ್ ಆಡಿಷನ್ ಶಿವಮೊಗ್ಗದಲ್ಲಿ ಇದೇ ಶನಿವಾರದಂದು

ಶಿವಮೊಗ್ಗ : ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ನೋಡಿ ಉತ್ತಮ ವೇದಿಕೆ! ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ.
ತನ್ನ ವಿಭಿನ್ನ ಕಥಾ ಹಂದರದಿಂದ ನಿಮ್ಮ ಮನಕದ್ದ ಜೀ಼ ಕನ್ನಡ ಈಗ ನಿಮಗಾಗಿ ಮತ್ತೊಂದು ಸರ್ಪ್ರೈಸ್ ತಂದಿದೆ. ಹೌದು, ಆ ವಿಭಿನ್ನ ಕಥೆ ಬರೆಯುವ ಬರಹಗಾರರು ನೀವೇ ಯಾಕಾಗಬಾರದು? ಚೆನ್ನಾಗಿ ಕಥೆ ಬರೆಯುತ್ತೀರಾ? ಒಳ್ಳೆ ಸಂಭಾಷಣೆಯ ಕಲೆ ನಿಮ್ಮಲ್ಲಿ ಇದ್ಯಾ? ನೀವು ಬರಹಗಾರರಾಗಬೇಕೇ? ನಿಮ್ಮ ಪ್ರತಿಭೆಗೆ ತಕ್ಕ ಪ್ರತಿಫಲ ಸಿಗುತ್ತಿಲ್ಲವೇ? ಡೋಂಟ್ ವರಿ ಪ್ರತಿಭಾವಂತ ಬರಹಗಾರರಿಗೆ ಎಲ್ಲಿಯೂ ಸಿಗದ ಅವಕಾಶವನ್ನು ಹೊತ್ತು ಜೀ ಕನ್ನಡ ನಿಮ್ಮ ಮುಂದೆ ಬರ್ತಿದೆ. ನಿಮ್ಮೊಳಗಿರುವ ಕಥೆಗಾರ ಮತ್ತು ಸಂಭಾಷಣೆಕಾರರಿಗೆ ಇದು ಅತ್ಯುತ್ತಮ ವೇದಿಕೆಯಾಗಿದ್ದು, ನಿಮ್ಮ ಕಲೆಗೆ ಈ ವೇದಿಕೆಯಲ್ಲಿ ಬೆಲೆ ಸಿಗಲಿದೆ. ಜೀ ಕನ್ನಡ ‘ ರೈಟರ್ಸ್ ಆಡಿಷನ್ ‘ ನಲ್ಲಿ ನಿಮ್ಮ ಅತ್ಯುತ್ತಮ ಬರವಣಿಗೆ ಸಾಮರ್ಥ್ಯವನ್ನು ಪ್ರದರ್ಶಿಸಲು ಒಂದು ಅವಕಾಶವನ್ನು ನೀಡುವುದರ ಜೊತೆಗೆ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡುತ್ತಿದೆ.
ಇದೇ ಜನವರಿ 11 ರಂದು ಶನಿವಾರ ಬೆಳಗ್ಗೆ 9 ಗಂಟೆಗೆ ಬಸವೇಶ್ವರ ವಿದ್ಯಾಸಂಸ್ಥೆ, ತಾಲ್ಲೂಕು ಕಚೇರಿ ರಸ್ತೆ, ಕಾರ್ಪೊರೇಷನ್ ಹತ್ತಿರ.ಶಿವಮೊಗ್ಗ ಇಲ್ಲಿ ನಡೆಯಲಿದೆ.ಬನ್ನಿ ಜೀ಼ ಕನ್ನಡ ನಡೆಸಿಕೊಡುತ್ತಿರುವ ರೈಟರ್ಸ್ ಆಡಿಷನ್ ನಲ್ಲಿ ಪಾಲ್ಗೊಂಡು ಬರಹಗಾರರರಾಗುವ ನಿಮ್ಮ ಕನಸನ್ನು ನನಸಾಗಿಸಿ.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ