ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆಶ್ರಯ ಯೋಜನೆಯ ಫಲಾನುಭವಿಗಳಿಗೆ ಸಿಕ್ಕ ಜಯ

ಆಶ್ರಯ ಯೋಜನೆಯ ಮನೆಗಳನ್ನು ಹಸ್ತಾಂತರಿಸಲು ದಿನಾಂಕ 28.01.2025 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿರುವ ಮಾನ್ಯ ವಸತಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಜಮೀರ್ ಅಹ್ಮದ್!!

ಶಿವಮೊಗ್ಗ: ನಗರದ ಗೋವಿಂದಾಪುರ ಹಾಗೂ ಗೋಪಿಶೆಟ್ಟಿಕೊಪ್ಪದಲ್ಲಿ ಪ್ರಧಾನ ಮಂತ್ರಿ ಆಶ್ರಯ ಯೋಜನೆ ಅಡಿಯಲ್ಲಿ ಈಗಾಗಲೇ ನಿರ್ಮಾಣಗೊಂಡು ಫಲಾನುಭವಿಗಳಿಗೆ ಹಸ್ತಾಂತರಿಸಲು ಸಿದ್ಧವಾಗಿರುವ 652 ಮನೆಗಳ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಮಾನ್ಯ ವಸತಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಜಮೀರ್ ಅಹ್ಮದ್ ಅವರನ್ನು ಕಳೆದ ವಾರ ಭೇಟಿಯಾಗಿ, ಮನೆಗಳ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಮನೆಗಳಲ್ಲಿ ಇರುವಂತಹ ನೀರಿನ ಹಾಗೂ ವಿದ್ಯುತ್ ಸಮಸ್ಯೆಗಳ ಕುರಿತು ಶಿವಮೊಗ್ಗ ಶಾಸಕ ಶ್ರೀ ಎಸ್ ಎನ್ ಚನ್ನಬಸ್ಸಪ್ಪ ಅವರು ಸುಧೀರ್ಘ ಚರ್ಚೆ ನಡೆಸಿದರು. ಜನವರಿ 18ರಂದು ಹಸ್ತಾಂತರ ಪ್ರಕ್ರಿಯೆಯನ್ನು ನಡೆಸಲು ಈ ಮೊದಲೇ ನಿಗದಿಪಡಿಸಲಾಗಿತ್ತು. ಆದರೆ ಕೇಂದ್ರ ಸಚಿವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

ಆಗ ಮತ್ತೊಂದು ದಿನ ಶಿವಮೊಗ್ಗ ನಗರಕ್ಕೆ ಖಂಡಿತವಾಗಿ ಆಗಮಿಸುವುದಾಗಿ ಮಾನ್ಯ ಸಚಿವರು ತಿಳಿಸಿದ್ದರೂ, ಆದರೆ ಸತತ ಪರಿಶ್ರಮದ ಫಲವಾಗಿ ದಿನಾಂಕ 28.01.2025ರ ಮಂಗಳವಾರದಂದು ಶಿವಮೊಗ್ಗ ನಗರಕ್ಕೆ ಆಗಮಿಸುವುದಾಗಿ ಇಂದು ಮಾನ್ಯ ಸಚಿವರಾದ ಜಮೀರ್ ಅಹ್ಮದ್ ಅವರು ದೂರವಾಣಿ ಮೂಲಕ ತಿಳಿಸಿದ್ದು, ಅವರ ಉಪಸ್ಥಿತಿಯಲ್ಲಿ ಮನೆಗಳ ಹಸ್ತಾಂತರ ಪ್ರಕ್ರಿಯೆಯು ನಡೆಯಲಿದೆ ಎಂದು ಈ ಮೂಲಕ ತಮಗೆ ಹಾಗು ತಮ್ಮ ಮೂಲಕ ನಗರದ ನಾಗರೀಕರಿಗೆ ತಿಳಿಸಲು ಇಚ್ಚಿಸುತ್ತೇನೆ ಎಂದು ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದು ನಮ್ಮೆಲ್ಲರ ಸತತ ಹೋರಾಟಕ್ಕೆ ಸಿಕ್ಕ ಪ್ರತಿಫಲ!

ಆಶ್ರಯ ಯೋಜನೆಯ ಫಲಾನುಭವಿಗಳಿಗೆ ಸಿಕ್ಕ ಜಯ!

ಈ ಸಂದರ್ಭದಲ್ಲಿ ಶಿವಮೊಗ್ಗ ನಗರದ ಸಮಸ್ತ ನಾಗರೀಕರ ಪರವಾಗಿ ಆಶ್ರಯ ಯೋಜನೆಯ ಫಲಾನುಭವಿಗಳ ಸಹನೆಗೆ ಅಭಿನಂದನೆಗಳು ಹಾಗೂ ಧನ್ಯವಾದಗಳನ್ನು ಸಮರ್ಪಿಸುತ್ತೇನೆ ಎಂದು ಅವರು ಪುನರುಚ್ಚರಿಸಿದ್ದಾರೆ.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ