ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭೂಮಿಯ ಮೇಲಿನ ಭಗವಂತರು( ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು )

ಧರೆಗೆ ನಕ್ಷತ್ರವಾಗಿ ಬಂದೆ ಗುರುವೇ ಶಿವಣ್ಣನಾಗಿ ಹೊನ್ನೇಗೌಡ-ಗಂಗಮ್ಮರ ಮುದ್ದಿನ ಕಂದನಾಗಿ
1907 ಏಪ್ರಿಲ್ 1 ರಲ್ಲಿ ಮಹಾ ಚೇತನವಾಗಿ
ಬದಲಾಯಿಸಿದಿರಿ ನಡೆದ ದಾರಿಯನ್ನೇ ಸ್ವರ್ಗವಾಗಿ

ಕಲಿಯುಗದ ನಡೆದಾಡುವ ನಿಜ ದೇವರಾಗಿ
ಹಗಲಿರುಳೆನ್ನದೆ ಬಡ ಮಕ್ಕಳಿಗಾಗಿ ದುಡಿದ ಕಾಯಕಯೋಗಿ ಅನ್ನ,ಜ್ಞಾನ ಹಾಗೂ ಅಕ್ಷರದ ತ್ರಿವಿಧ ದಾಸೋಹಿಯಾಗಿ
ಆಧ್ಯಾತ್ಮಿಕ ನಾಯಕ ಸಿದ್ದಗಂಗಾ ಮಠದ ಮಹಾಯೋಗಿ

ರಾಮನಗರದ ಮಾಗಡಿಯ ವೀರಾಪುರದ ಉಸಿರು ಬೆಳಗಿಸಿದಿರಿ ನಾಡಿನೆಲ್ಲೆಡೆ ಸಿದ್ದಗಂಗೆಯ ಹೆಸರು ಪದ್ಮಭೂಷಣ ಪಡೆದ ತುಮಕೂರಿನ ಕಲ್ಪತರು
ಜಾತಿ ಮತ ಪಂಥವ ಮೀರಿ ಬೆಳೆದ ಕರುನಾಡಿನ ರತ್ನರು

ಲಕ್ಷಾಂತರ ಮಕ್ಕಳಿಗೆ ಅಕ್ಷರವ ಕಲಿಸಿದವರು
ಯಾರೂ ಏರಲಾರದ ಎತ್ತರಕೆ ಏರಿದವರು
ಅಜ್ಞಾನವ ತೊಲಗಿಸಿ ಜ್ಞಾನ ಪಸರಿಸಿದವರು
ಮೌನ ಮಾತಿನಿಂದ ಜಗಕೆ ಜ್ಯೋತಿಯಾದವರು

ದೇವರಂತೆ ಬೆಳಕಾಗಿ ಪೂಜ್ಯರಂತೆ ನೆರಳಾಗಿ
ತಂದೆಯಂತೆ ಆಶ್ರಯವಾಗಿ ತಾಯಿಯಂತೆ ಕರುಣಾಮಯಿಯಾಗಿ ಬಸವಣ್ಣನಂತೆ ಆದರ್ಶವಾಗಿ ವಿವೇಕಾನಂದರಂತೆ ಮಾದರಿಯಾಗಿ
ಸಂತನಂತೆ ಮಹಾ ಸಿದ್ದಿಗಾಗಿ ಜ್ಞಾನಿಯಂತೆ ದಾರಿದೀಪವಾಗಿ

(ಸರ್ವರಿಗೂ ದಾಸೋಹ ದಿನದ ಭಕ್ತಿಪೂರ್ವಕ ಶುಭಾಶಯಗಳು )

  • ಶ್ರೀ ಮುತ್ತು.ಯ.ವಡ್ಡರ, ಬಾಗಲಕೋಟೆ
    ಶ್ರೀ ಮಠದ ಹಳೆಯ ವಿದ್ಯಾರ್ಥಿ.
    9845568484
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ