ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೆ ಆರ್ ಎಸ್ ಪಕ್ಷದ ರೈತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಿರುಪಾದಿ ಕೆ ಗೋಮರ್ಸಿ ನೇಮಕ

ಬೆಂಗಳೂರು : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ರೈತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಿರುಪಾದಿ ಕೆ ಗೋಮರ್ಸಿ ಅವರನ್ನು ನೇಮಕ ಮಾಡಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ ಎನ್ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿಯಲ್ಲಿ ಆದೇಶ ಪತ್ರ ಸ್ವೀಕರಿಸಿ ಮಾತನಾಡಿದ ನಿರುಪಾದಿ ಕೆ ಗೋಮರ್ಸಿ ಕೆ ಆರ್ ಎಸ್ ಪಕ್ಷವು ನನ್ನ ಮೇಲೆ ನಂಬಿಕೆಯನಿಟ್ಟು ಈಗಾಗಲೇ ಹಲವಾರು ಜವಾಬ್ದಾರಿಗಳನ್ನು ಕೊಟ್ಟಿದ್ದು ಇನ್ನೂ ಹೆಚ್ಚಿನ ಜವಾಬ್ದಾರಿಯಾಗಿ ರೈತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ, ನನ್ನ ನಿತ್ಯ ನಿರಂತರ ಬಡವರ ,ಹಿಂದುಳಿದವರ,ರೈತರ ಸಮಾಜಿಕ ಸೇವೆಯನ್ನು ಮತ್ತು ಸಂಘಟನಾ ಶಕ್ತಿಯನ್ನು ಗುರುತಿಸಿ ಈ ಅವಕಾಶ ನೀಡಿದ್ದಕ್ಕಾಗಿ ಕೆಆರ್‌ಎಸ್ ಪಕ್ಷದ ರಾಜ್ಯ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೆ ಧನ್ಯವಾದಗಳು ಎಂದು ತಿಳಿಸಿದರು.

ಸ್ವಚ್ಛ,ಪ್ರಾಮಾಣಿಕ,ಪ್ರಾದೇಶಿಕ,ಜನಪರ ರಾಜಕಾರಣಕ್ಕಾಗಿ ಹಲವಾರು ವರ್ಷಗಳಿಂದ ಅನ್ಯಾಯ,ಅಕ್ರಮ,ಭ್ರಷ್ಟಾಚಾರ,ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ನಿತ್ಯ ನಿರಂತರವಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ನಾಡಿನಾದ್ಯಂತ ರೈತರ ಸಮಸ್ಯೆಗಳು,ಕುಂದು ಕೊರತೆಗಳ ನಿವಾರಣೆಗಾಗಿ ಹಾಗೂ ರೈತರ ಶ್ರೇಯೋಭಿವೃದ್ಧಿಯ ಉಳಿವಿಗಾಗಿ ಪಕ್ಷವು ಈಗಾಗಲೇ ರಾಜ್ಯ ರೈತ ಘಟಕದಿಂದ ಹಲವಾರು ಹೋರಾಟಗಳು,ಅಭಿಯಾನಗಳು,ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು. ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗಬೇಕಾದ ಮೂಲಭೂತ ಸೇವಾ ಮತ್ತು ಸೌಲಭ್ಯಗಳು,ಯೋಜನೆಗಳು ಸಿಗದಂತಾಗಿದ್ದು ಅವುಗಳು ಮಧ್ಯವರ್ತಿಗಳ ಪಾಲಾಗುತ್ತಿವೆ. ಅಧಿಕಾರಿ ವರ್ಗದವರು ಸಹ ರೈತರ ಬಗ್ಗೆ ಕಿಂಚಿತ್ತು ಕಾಳಜಿ ವಹಿಸದೆ ಅವರ ಮೇಲೆ ನಾನಾ ರೀತಿಯ ದಬ್ಬಾಳಿಕೆ,ದೌರ್ಜನ್ಯಗಳು ನಡೆಸಿದಂತ ಉದಾಹರಣೆಗಳು ಕಂಡುಬಂದಿದ್ದು. ಇನ್ನು ಮುಂದೆ ರಾಜ್ಯಾದ್ಯಂತ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ರೈತರ ಪರವಾದ ಅಭಿಯಾನಗಳನ್ನ, ಕಾರ್ಯಕ್ರಮಗಳನ್ನು, ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು. ರಾಜಾದ್ಯಂತ ರೈತರಿಗೆ ಯಾವುದೇ ಸಮಸ್ಯೆಗಳಾದಲ್ಲಿ ಕೆ ಆರ್ ಎಸ್ ಪಕ್ಷದ ರೈತ ಸಹಾಯವಾಣಿ 7676791041 ಗೆ ಸಂಪರ್ಕಿಸುವಂತೆ ತಿಳಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ, ದೀಪಕ್ ಸಿ ಎನ್, ರಾಜ್ಯ ಸಂಘಟನಾ ಕಾರ್ಯದರ್ಶಿ ಹಬೀಬ್, ಎಸ್ಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಫ.ಯ. ಗಣೇಶ್ ಸೇರಿದಂತೆ ಇನ್ನೂ ಅನೇಕರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ