ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಹಳ್ಳಿಗಳ ಅಭಿವೃದ್ಧಿಯೇ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಉದ್ದೇಶ

ಬೀದರ್/ ಚಿಟಗುಪ್ಪ : ಹಳ್ಳಿಗಳ ಅಭಿವೃದ್ಧಿಯೇ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಉದ್ದೇಶವಾಗಿದೆ. ದೇಶವಾಸ್ಥಗಳ , ಶಾಲೆಗಳ ಘಂಟನ್ನಾದವೇ ಅಭಿವೃದ್ಧಿ ಮೂಲ ಸಂಕೇತ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣಕುಮಾರ ಹೇಳಿದರು.

ತಾಲೂಕಿನ ಉಡಬಾಳ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 1.50 ಲಕ್ಷ ರೂ. ಚೆಕ್ ವಿತರಿಸಿ ಮಾತನಾಡಿದ ಅವರು ಬೀದರ್ ಜಿಲ್ಲೆ ಈಗ ಎಲ್ಲಾ ರೀತಿಯಲ್ಲೂ ಅಭಿವೃದ್ಧಿ ಹೊಂದುತ್ತಿದೆ. ಹೈನುಗಾರಿಕೆ ವೇಗವಾಗಿ ಬೆಳೆಯಲು ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಅನುದಾನ ಬಳಕೆ ಮಾಡಿಕೊಂಡು ಬೀದರ ಜಿಲ್ಲೆಯವರು ಯಶಸ್ವಿ ಹೈನುಗಾರಿಕೆಯತ್ತ ಬೆಳೆಯುತ್ತಿದ್ದಾರೆ ಎಂದರು.
ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಗಳು ಹಾಕಿಕೊಂಡು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ಮಾಡಲಾಗುತ್ತಿದೆ. ವಿಶೇಷವಾಗಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ವಿಶೇಷ ಅನುದಾನ ನೀಡಿ, ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಮಾಡುತ್ತಿದ್ದೇವೆ ಎಂದು ಹೇಳಿದರು.

ಜನಜಾಗೃತಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ ಅನುದಾನ ಉಪಯೋಗಿಸಿಕೊಂಡು ದೇವಸ್ಥಾನ ಅಭಿವೃದ್ಧಿ ಹೊಂದಿ , ಗ್ರಾಮಕ್ಕೆ ಮಾದರಿ ಮತ್ತು ಪ್ರೇರೇಪಣೆ ಆಗಲಿ ಎಂದರು.

ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಜಿಲ್ಲಾ ಸದಸ್ಯರಾದ ಸಂತೋಷ ಹಳ್ಳಿಖೇಡಕರ್, ಸಂಗಮೇಶ ಎನ್ ಜವಾದಿ ಸೇರಿದಂತೆ ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕು ಯೋಜನಾಧಿಕಾರಿ ಬಸವರಾಜ ರವರು ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಿದ್ದು ಪೂಜಾರಿ ನಿರೂಪಿಸಿ, ವಂದಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ