ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕೂಡ್ಲಿಗಿ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಮಾನ್ಯ ಪೋಲಿಸ್ ಅಧ್ಯಕ್ಷರು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಜಯನಗರ ರವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ಮತ್ತು ಸಾರ್ವಜನಿಕ ಕುಂದು ಕೊರತೆ ಸಭೆ ಜರುಗಿದ್ದು ಈ ಸಭೆಯಲ್ಲಿ ಗುಡೆಕೋಟೆ ಭೀಮಸಮುದ್ರ , ಗುಂಡ ಮುಡುಗು, ಕಾನ ಹೊಸಳ್ಳಿ ಹಾಗೂ ಕೂಡ್ಲಿಗಿ ನಗರದ ಸೇರಿದಂತೆ ಇತರೆ ಗ್ರಾಮದಿಂದ ಸಾರ್ವಜನಿಕರು ಕಂದಾಯ ಇಲಾಖೆ , ಗ್ರಾಮ ಪಂಚಾಯಿತಿ , ತಾಲೂಕು ಪಂಚಾಯಿತಿ ಭೂಮಾಪನ ಇಲಾಖೆ ಮೊದಲಾದ ಇಲಾಖೆಗಳಲ್ಲಿ ತಮ್ಮ ಕೆಲಸ ಕಾರ್ಯಗಳು ವಿಳಂಬವಾಗುತ್ತಿರುವ ಬಗ್ಗೆ ಸುಮಾರು 13 ಕುಂದು ಕೊರತೆ ಅರ್ಜಿಗಳನ್ನು ಸಲ್ಲಿಸಿದ್ದು ಮಾನ್ಯ ಪೋಲಿಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ರವರು ಅರ್ಜಿಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನೀಡಿ ನಿಗದಿತ ದಿನದಲ್ಲಿ ನಿಯಾಮನುಸಾರ ವಿಲೇ ಮಾಡುವಂತೆ ಸೂಚನೆ ನೀಡಿದರು.

ಅಲ್ಲದೆ ಎಲ್ಲಾ ಇಲಾಖೆಯವರು ಸಕಾಲ ಬೋರ್ಡ್, ಆರ್ ಟಿ ಐ ಮಾಹಿತಿ ಬೋರ್ಡ್, ಲೋಕಾಯುಕ್ತ ಇಲಾಖೆಯ ಬೋರ್ಡ್ ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮಾಹಿತಿ ತಲುಪಿಸುವುದು ಹಾಗೂ ಸಾರ್ವಜನಿಕರಿಗೆ ವಿನಾಕಾರಣ ಸತಾಯಿಸದೆ ಅವರ ಕೆಲಸವನ್ನು ನಿಯಮನುಸಾರ ಮಾಡಿಕೊಡಬೇಕೆಂದು ಸೂಚನೆಗಳನ್ನು ನೀಡಿದರು.

ಈ ಸಭೆಯಲ್ಲಿ ಶ್ರೀ ಸಿದ್ದರಾಜು ಮಾನ್ಯ ಪೊಲೀಸ್ ಅಧಿಕ್ಷಕರು, ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಜಯನಗರ, ಶ್ರೀ ಅಮರೇಶ್ ಹುಬ್ಬಳ್ಳಿ, ಪೊಲೀಸ್ ಇನ್ಸ್ಪೆಕ್ಟರ್ ಕರ್ನಾಟಕ ಲೋಕಾಯುಕ್ತ ವಿಜಯನಗರ ಜಿಲ್ಲೆ, ಶ್ರೀಮತಿ ರೇಣುಕಾ ತಹಶೀಲ್ದಾರರು ಕೂಡ್ಲಿಗಿ, ಶ್ರೀ ನರಸಪ್ಪ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯಿತಿ ಕೂಡ್ಲಿಗಿ, ನೇತ್ರಾವತಿ ಸೇರಿದಂತೆ ಮೊದಲಾದ ಅಧಿಕಾರಿಗಳು ಹಾಜರಿದ್ದರು. ಸಭೆಯ ನಂತರ ಕೂಡ್ಲಿಗಿ ತಾಲೂಕಿನ ಆಸ್ಪತ್ರೆ ಹಾಗೂ ಹೊಸಪೇಟೆ ರಸ್ತೆಯಲ್ಲಿರುವ ಅಂಗನವಾಡಿ ಕೇಂದ್ರ ಪರಿಶೀಲನೆ ಮಾಡಿದರು ಹಾಗೂ ಸೂಕ್ತ ಸೂಚನೆ ಸಲಹೆಗಳನ್ನು ನೀಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ