ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಫೆ.28 ಕ್ಕೆ ಚುನಾವಣೆ ವೇಳಾಪಟ್ಟಿ ತಹಶೀಲ್ದಾ‌ರ್ ಘೋಷಣೆ

ಕಲಬುರಗಿ/ಚಿತ್ತಾಪುರ: ಕಲಬುರಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಚಿತ್ತಾಪುರ ಪುರಸಭೆಯ 10ನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡಲಾಗಿದ್ದು ಪುರಸಭೆಯ ಎಲ್ಲಾ ಸದಸ್ಯರಿಗೆ ನೋಟಿಸ್‌ ತಲುಪಿಸಲು ಮುಖ್ಯಾಧಿಕಾರಿಗೆ ಸೂಚಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು 16 ಆಗಸ್ಟ್ 2024 ಉಲ್ಲೇಖಿತ (1) ಇವರ ನಡುವಳಿ ಆದೇಶದ ಮೇರೆಗೆ ಚಿತ್ತಾಪುರ ಪುರಸಭೆ 10ನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯನ್ನು ಜರುಗಿಸುವ ಕುರಿತು ತಹಶೀಲ್ದಾರರು ಚಿತ್ತಾಪುರ ಇವರಿಗೆ ಚುನಾವಣಾಧಿಕಾರಿಗಳು ಎಂದು ನೇಮಕ ಮಾಡಲಾಗಿರುತ್ತದೆ. ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಬೆಂಗಳೂರು ಇವರ ಅಧಿಸೂಚನೆ 5 ಆಗಸ್ಟ್ 2024 ಉಲ್ಲೇಖಿತ (2) ರ ಪ್ರಕಾರ ಚಿತ್ತಾಪುರ ಪುರಸಭೆ ಅಧ್ಯಕ್ಷ ಸ್ಥಾನ ಪ.ಜಾ ಮಹಿಳೆ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿ.ಸಿ.ಎ ಮಹಿಳೆ ವರ್ಗಕ್ಕೆ ಮೀಸಲಿರಿಸಲಾಗಿರುತ್ತದೆ.
ಕಲಬುರಗಿ ಜಿಲ್ಲಾಧಿಕಾರಿಗಳ ಆದೇಶದಂತೆ ಚಿತ್ತಾಪುರ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯನ್ನು ನಡೆಸುವ ಕುರಿತು ಸರ್ವ ಸದಸ್ಯರ ಸಭೆಯನ್ನು ಫೆ. 28 ರಂದು ಚಿತ್ತಾಪುರ ಪುರಸಭೆ ಕಚೇರಿಯ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ

ಚುನಾವಣಾ ವೇಳಾ ಪಟ್ಟಿ:

ನಾಮಪತ್ರ ಸಲ್ಲಿಸುವುದು ಫೆ.28 ರಂದು ಬೆಳಗ್ಗೆ 10 ರಿಂದ 12 ಗಂಟೆ, ಚುನಾವಣೆ ಸಭೆ ಮಧ್ಯಾಹ್ನ 1 ರಿಂದ 1.10 ಗಂಟೆ, ನಾಮಪತ್ರ ಪರಿಶೀಲನೆ ಮಧ್ಯಾಹ್ನ 1.15 ರಿಂದ 1.30 ಗಂಟೆ, ಉಮೇದುವಾರಿಕೆ ಹಿಂಪಡೆಯುವುದು ಮಧ್ಯಾಹ್ನ 1.30 ರಿಂದ 2 ಗಂಟೆ, ಚುನಾವಣೆ (ಅಗತ್ಯವಿದ್ದಲ್ಲಿ) ಕೈ ಎತ್ತುವ ಮೂಲಕ ಮಧ್ಯಾಹ್ನ 2.05 ಗಂಟೆ.
ಸದರಿ ಸಭೆಗೆ ಎಲ್ಲಾ ಸದಸ್ಯರು ಹಾಗೂ ಉಮೇದುದಾರರು ಚುನಾಯಿತ ಪ್ರಮಾಣ ಪತ್ರವನ್ನು ತರತಕ್ಕದ್ದು, ಅಭ್ಯರ್ಥಿಗಳು ನಾಮಪತ್ರಗಳಿಗೆ ಮೂಲ ಜಾತಿ ಪ್ರಮಾಣಪತ್ರವನ್ನು ಲಗತ್ತಿಸಬೇಕು, ಉಮೇದುದಾರರು ಬಾಕಿ ರಹಿತ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ಹಾಜರು ಪಡಿಸತಕ್ಕದ್ದು, ನೋಟಿಸು ತಲುಪಿದಕ್ಕಾಗಿ ದ್ವೀಪ್ರತಿ ಮೇಲೆ ಕಡ್ಡಾಯವಾಗಿ ದಿನಾಂಕ ನಮೂದಿಸಿ ರುಜು ಮಾಡತಕ್ಕದ್ದು ಎಂದು ತಿಳಿಸಿದ್ದಾರೆ.

ವರದಿ ಮೊಹಮ್ಮದ್ ಅಲಿ, ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ