ಬಳ್ಳಾರಿ/ಕಂಪ್ಲಿ: ಆರ್ಯವೈಶ್ಯ ಸಂಘ ಕಂಪ್ಲಿ, ಕಲ್ಯಾಣ ಮಂಟಪ ಅಭಿವೃದ್ದಿ ಸಮಿತಿ , ವಾಸವಿ ಯುವಜನ ಸಂಘ ಹಾಗೂ ಮಹಿಳಾ ಮಂಡಳಿ ವತಿಯಿಂದ ನಗರದ ಶ್ರೀ ನಗರೇಶ್ವರ ಮತ್ತು ಶ್ರೀ ಕನ್ಯಕಾ ಪರಮೇಶ್ವರಿ ನವಗ್ರಹಗಳ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಿತು.
ಬಾಲ ಆಲಯಗಳಲ್ಲಿ ದೇವರ ಪ್ರತಿಷ್ಠಾಪನೆಯು ವಾಸ್ತು ತಜ್ಞರು ಹಾಗೂ ಪುರೋಹಿತರಾದ ಪೂಜ್ಯ ಗುರುಗಳಾದ ಶ್ರೀ ರಮಣ ಬಾಬು ನೇತೃತ್ವದಲ್ಲಿ ನಡೆಯಿತು.
ಬಾಲ ಆಲಯ ದೇವರ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಶ್ರೀ ಗಣೇಶ, ಶ್ರೀಪಾರ್ವತಿ ದೇವಿ ಸಹಿತ ಶ್ರೀನಗರೇಶ್ವರ ಹಾಗೂ ಶ್ರೀ ಕನ್ಯಕಾ ಪರಮೇಶ್ವರಿ ಮತ್ತು ನವಗ್ರಹಗಳ ಮೂರ್ತಿಗಳನ್ನು ಶಾಸ್ತ್ರೋಕ್ತವಾಗಿ ಪೂಜಾ ವಿಧಿ ವಿಧಾನಗಳೊಂದಿಗೆ ಪ್ರತಿಷ್ಠಾಪಿಸಿ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು. ನಂತರ ಅನ್ನ ಸಂತರ್ಪಣೆ ನಡೆಯಿತು. ಈ ಕಾರ್ಯಕ್ರಮದಲ್ಲಿ ವಾಸವಿ ಯುವಜನ ಸಂಘದ ಅಧ್ಯಕ್ಷ ದರೋಜಿ ಮಂಜೇಶ್ ಮಾತನಾಡಿ ಧರ್ಮದ ಜಾಗೃತಿ ಇದ್ದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಾಧ್ಯವಿದೆ’ ರಾಜ್ಯದಲ್ಲಿ ಸಮೃದ್ಧ ಮಳೆ ಬೆಳೆ ಆಗುವಂತೆ ಪ್ರಾರ್ಥಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆರ್ಯವೈಶ್ಯ ಸಮಾಜದ ಹಿರಿಯರು, ಯುವಜನ ಸಂಘದ ಪದಾಧಿಕಾರಿಗಳು ಹಾಗೂ ವಾಸವಿ ಮಹಿಳಾ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಜಿಲಾನ್ ಸಾಬ್ ಬಡಿಗೇರ್




















