ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ದುರ್ಗಾದೇವಿ ದೇವಾಲಯದ ಪ್ರಾರಂಭೋತ್ಸವ ಹಾಗೂ ಪ್ರತಿಷ್ಠಾಪನೆ ಸಮಾರಂಭ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಸಬಾ ಹೋಬಳಿ ಕಡಮಲಕುಂಟೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ದುರ್ಗಾದೇವಿ ದೇವಾಲಯದ ಪ್ರಾರಂಭೋತ್ಸವ ಹಾಗೂ ಪ್ರತಿಷ್ಠಾಪನೆ ಸಮಾರಂಭ ಗ್ರಾಮದ ಸರ್ವ ಸಮುದಾಯದವರ ಸಹಕಾರದೊಂದಿಗೆ ಭಕ್ತರ ಸಡಗರದ ಮಧ್ಯೆ ವಿಜೃಂಭಣೆಯಿಂದ ನೆರವೇರಿತು.
ಕಳೆದ ಮೂರು ದಿನಗಳಿಂದ ವಿಶೇಷ ಪೂಜೆ ನೆರವೇರಿಸಲಾಯಿತು

ಗಂಗಾಪ್ರವೇಶ, ಗಣಪತಿ ಪೂಜೆ, ಪಂಚಾಮೃತ ಅಭಿಷೇಕ, ಕುಂಭಾಭಿಷೇಕ, ನವಗ್ರಹ ಹೋಮಗಳು, ದುರ್ಗಾಹೋಮ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು, ದೇವಾಲಯ ಆರಂಭೋತ್ಸವ ಹಾಗೂ ಪ್ರತಿಷ್ಠಾಪನೆ ಪ್ರಧಾನ ಅರ್ಚಕರ ನೇತೃತ್ವದಲ್ಲಿ ನೆರವೇರಿದವು.

ಉತ್ತಮ ಮಳೆ ಬೆಳೆಯಾಗಲೆಂದು ಊರಿನ ಗ್ರಾಮಸ್ಥರು ಪೂಜೆ ಸಲ್ಲಿಸಿದರು. ಭಕ್ತರಿಗೆ ದುರ್ಗಾದೇವಿ ಕಾರ್ಯಕಾರಿ ಸಮಿತಿ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಶಾಸಕರು ಹಾಗೂ ತುಮುಲ್ ಅಧ್ಯಕ್ಷರಾದ ಹೆಚ್ ವಿ ವೆಂಕಟೇಶ್ ರವರು ಭಾಗವಹಿಸಿ ದುರ್ಗಾ ದೇವಿಯ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಶೇಷಗಿರಿ, ಪುರಸಭಾ ಸದಸ್ಯ ಎನ್ ರವಿ, ಬತ್ತೀನೇನಿ ನಾನಿ, ಕೆ ಎ ನಾಗಭೂಷಣ, ರಾಮಾಂಜಿನಪ್ಪ ವಕೀಲ ಹನುಮಂತರಾಯಪ್ಪ, ನವರು ಸೇರಿದಂತೆ ಸ್ಥಳೀಯ ಮುಖಂಡರುಗಳು ಹಾಜರಿದ್ದರು.

ವರದಿ ಪಾವಗಡ ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ