ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಕೊಟ್ಟೂರೇಶ್ವರ ಕಾಲೇಜಿನ ಗಣಕ ಯಂತ್ರ ವಿಜ್ಙಾನ ವಿಭಾಗದ ಪ್ರಾಧ್ಯಾಪಕ ಡಾ. ಸ್ವಾಮಿ ಆರಾಧ್ಯಮಠ ಇವರಿಗೆ ಇತ್ತೀಚಿಗೆ ಬೆಳಗಾವಿಯಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕೋತ್ಸವದಲ್ಲಿ ಪಿ ಎಚ್ ಡಿ ಪದವಿ ಪ್ರದಾನ ಮಾಡಲಾಯಿತು.
ಹೊಸಪೇಟೆಯ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಯು.ಎಂ.ರೋಹಿತ ಇವರ ಮಾರ್ಗದರ್ಶನದಲ್ಲಿ ‘ಎಫಿಶಿಯೆಂಟ್ ಸಾಫ್ಟ್ ಕಂಪ್ಯೂಟಿಂಗ್ ಮೆಥಡ್ಸ್ ಫಾರ್ ಮಾಡಲಿಂಗ್ ಆಫ್ ಸ್ಮಾರ್ಟ್ ಸಿಟಿಸ್ ’ ಎಂಬ ವಿಷಯದ ಬಗ್ಗೆ ಮಂಡಿಸಿದ್ದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು, ಪ್ರಾಂಶುಪಾಲರು ಹಾಗೂ ಭೋದಕ, ಭೋದಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
