ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮುಂಡಗೋಡ :ಕರುನಾಡ ಕಂದ ವರದಿಯ ಫಲಶೃತಿ

ನೀರಿನ ಗುಣಮಟ್ಟ ಕುರಿತ ವರದಿ ಹಿನ್ನೆಲೆ : ಎಚ್ಚೆತ್ತ ಪಟ್ಟಣ ಪಂಚಾಯ್ತಿಯಿಂದ ನೀರು ಪರೀಕ್ಷೆ

ಉತ್ತರ ಕನ್ನಡ/ ಮುಂಡಗೋಡ : ನಗರದ ಹೈಸ್ಕೂಲ್ ಒಂದಕ್ಕೆ ಪೂರೈಕೆಯಾಗುತ್ತಿರುವ ಮಕ್ಕಳ ಕುಡಿಯುವ ನೀರು ಗುಣಮಟ್ಟದಿಂದ ಕೂಡಿಲ್ಲ ಎಂಬ ‘ಕರುನಾಡ ಕಂದ’ ಪತ್ರಿಕೆಯ 1-3-2025 ರ ಸಂಚಿಕೆಯಲ್ಲಿ ಪ್ರಕಟವಾದ ವಿಸ್ತೃತ ವರದಿಯ ಬೆನ್ನಲ್ಲೇ ಎಚ್ಚೆತ್ತ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಮುಂಡಗೋಡ ನಗರ ಭಾಗದಲ್ಲಿರುವ , ಪಟ್ಟಣ ಪಂಚಾಯ್ತಿ ಯಿಂದ ನಿರ್ವಹಣೆ ಮಾಡಲಾಗುವ ಶುದ್ಧ ಕುಡಿಯುವ ನೀರಿನ ಘಟಕಗಳ ನೀರನ್ನು ಹಾಗೂ ಪಟ್ಟಣ ಪಂಚಾಯ್ತಿ ವತಿಯಿಂದ ಮನೆಗಳಿಗೆ ನಲ್ಲಿ ಗಳ ಮೂಲಕ ಪೂರೈಕೆಯಾಗುವ ನೀರನ್ನು ಲ್ಯಾಬ್ ಪರೀಕ್ಷೆಗೆ ಕಳಿಸುವ ಮೂಲಕ ಮುನ್ನೆಚ್ಚರಿಕಾ ಕ್ರಮವನ್ನು ಅನುಸರಿಸಿದೆ.
ಬೋರ್ ಮೂಲಕ ಕೆಲವೆಡೆ ಪೂರೈಕೆಯಾಗುವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಿರಬಹುದು ಎಂಬ ಹಿನ್ನೆಲೆಯಲ್ಲಿ , ಒಟ್ಟಾರೆ ನಗರದ 5 ನೀರು ಶುದ್ಧೀಕರಣ ಘಟಕಗಳು ಸೇರಿದಂತೆ ಒಟ್ಟು 8 ಕಡೆಗಳಲ್ಲಿನ ನೀರಿನ ಸ್ಯಾಂಪಲ್ ಲ್ಯಾಬ್ ಗೆ ಕಳಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ ಕರುನಾಡ ಕಂದ ವರದಿಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವರದಿ – ಶಿವರಾಜ್ ಶಿರಾಲಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ