ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಜೆಸಿಐ ಕಂಪ್ಲಿ ಸೋನಾ ವತಿಯಿಂದ ಮಹಿಳಾ ದಿನಾಚರಣೆ

ಬಳ್ಳಾರಿ/ ಕಂಪ್ಲಿ : ಮಹಿಳೆಯರು ಶೈಕ್ಷಣಿಕವಾಗಿ, ಆರ್ಥಿಕವಾಗಿ ಸ್ವಾವಲಂಬಿಯಾದರೆ ಮಾತ್ರ ಲಿಂಗ ಸಮಾನತೆ ಸಾಧ್ಯ ಎಂದು ಸರ್ಕಾರಿ ಶಾಲೆಯ ವಿಜ್ಞಾನ ಶಿಕ್ಷಕ ಮುಖ್ಯ ಭಾಷಣಕಾರ ವಸಂತ ಅವರು ಹೇಳಿದರು.
ಪಟ್ಟಣದ ರಾಘವೇಂದ್ರ ಸ್ವಾಮಿ ಕಲ್ಯಾಣ ಮಂಟಪದ ಬಳಿಯ ಎಂ.ಡಿ. ಕ್ಯಾಂಪಿನಲ್ಲಿರುವ ಸಮಾಜ ಕಲ್ಯಾಣ‌ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಜೆಸಿಐ ಕಂಪ್ಲಿ ಸೋನಾ ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ‌ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಕೂಡಾ ಮಹಿಳೆಯರ ಅಭಿವೃದ್ಧಿ, ಸಮಾನತೆಗೆ ಪೂರಕ ನಿಜ ಆದರೆ ಕಷ್ಟಪಟ್ಟು ವಿದ್ಯಾರ್ಜನೆ ಮಾಡಿದರೆ ಮಾತ್ರ ಯಶಸ್ವಿಯಾಗಲು ಸಾಧ್ಯವಾಗುತ್ತೆ ಕಾನೂನಿನಲ್ಲಿ ಮಹಿಳೆಯರಿಗಾಗಿ ಏನೇನು ಸೌಲಭ್ಯಗಳಿವೆ ಎಂಬುದು ಅರಿಯಬೇಕು, ಸಮಾಜದಲ್ಲಿ ವಿದ್ಯಾರ್ಥಿಗಳು ತಾವು ಕಾಲೇಜಿಗೆ ಹೋಗುತ್ತಿರುವ ಪ್ರಮುಖ‌ ಉದ್ದೇಶವನ್ನು ಮರೆಯಬಾರದು ಈ ಸುವರ್ಣ ದಿನಗಳನ್ನು ಪ್ರಗತಿಗೆ ಮೆಟ್ಟಿಲು ಮಾಡಿಕೊಳ್ಳಬೇಕು ಗುರಿಯನ್ನು ತಲುಪಬೇಕು ಎಂದು ಕಿವಿ‌ಮಾತು‌ ಹೇಳಿದರು. ತ್ಯಾಗವಿಲ್ಲದೇ ಏನನ್ನೂ ಸಾಧಿಸಲು‌ ಸಾದ್ಯವಿಲ್ಲ. ಯಾವುದೇ ಕಾರಣ ನೀಡದೆ ಛಲದಿಂದ ಹಿಡಿದ‌ ಯಾವುದೇ ಕೆಲಸವನ್ನು‌ ಮುಗಿಸಿದರೆ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆಸಿಐ ಕಂಪ್ಲಿ ಸೋನಾ ಅಧ್ಯಕ್ಷ ಜೆಸಿ ಬಿ.ರಸೂಲ್ ಅವರು ಮಾತನಾಡಿ ಶೈಕ್ಷಣಿಕವಾಗಿ ಬಾಲಕಿಯರು ವಿದ್ಯಾವಂತರಾದರೆ ಯು ಪಿ ಎಸ್ ಸಿ ಹಾಗೂ ಕೆ ಪಿ ಎಸ್ ಸಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರದ ಉನ್ನತ ಹುದ್ದೆಗಳನ್ನು ಪಡೆಯಬಹುದು ಜೆಸಿಐ ವತಿಯಿಂದ ಮಹಿಳೆಯರ ಸಬಲೀಕರಣಕ್ಕೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.
ಈ ವೇಳೆ ನಿಲಯ ಪಾಲಕಿ ಕಾಳಮ್ಮ ಮಾತನಾಡಿ ಮಹಿಳೆಯರ ಸುರಕ್ಷತೆ ಹಾಗೂ ಭದ್ರತೆ ಕಲ್ಪಿಸುವ ಕಾರ್ಯದ ಜೊತೆಗೆ ಜಾಗೃತಿ ಮೂಡಿಸಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಲು ಜೆಸಿಐ ಸಂಸ್ಥೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಸನ್ಮಾನ: ಅಂತರಾಷ್ಟ್ರೀಯ ಮಹಿಳಾ‌ ದಿನಾಚರಣೆಯ ಅಂಗವಾಗಿ ಜೆಸಿಐ ಕಂಪ್ಲಿ ಸೋನಾ ಘಟಕದ ವತಿಯಿಂದ ನಿಲಯ ಪಾಲಕಿ ಕಾಳಮ್ಮ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಿಲಯ ಪಾಲಕ ವಿರುಪಾಕ್ಷಿ, ಜೆಸಿಐ ವಲಯ ಪೂರ್ವ ಉಪಾಧ್ಯಕ್ಷ ಜೆಸಿ ಸಂತೋಷ ಕೊಟ್ರಪ್ಪ ಸೋಗಿ, ಮಹಿಳಾ ಅಧ್ಯಕ್ಷೆ ಹೀನಾ ಕೌಸರ್, ಮಹಿಳಾ ಘಟಕದ ಪೂರ್ವಾಧ್ಯಕ್ಷೆ ಅಮೃತ, ಜೆಸಿಐ ಕಂಪ್ಲಿ ಸೋನಾ ಉಪಾಧ್ಯಕ್ಷ ಜೆಸಿ ಡಿ.ಇಸ್ಮಾಯಿಲ್, ಕಾರ್ಯಕ್ರಮದ ನಿರ್ದೇಶಕ ಜೆಸಿ ವೆಂಕಟ ಸಪ್ತಗಿರಿ, ನಿರ್ದೇಶಕ ಜೆಸಿ ಮನೋಜ ಕುಮಾರ, ದಾನಪ್ಪ ಸೇರಿದಂತೆ ನಿಲಯದ ಬಾಲಕಿಯರು ಉಪಸ್ಥಿತರಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ