ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಉಚಿತ ‘ ಫುಟ್ ಪಲ್ಸ್ ಥೆರಪಿ ‘

ಬಳ್ಳಾರಿ/ ಕಂಪ್ಲಿ : ಇಲ್ಲಿಯ ಸಂಜೀವಿನಿ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಆವರಣದಲ್ಲಿ ಬಸವಶ್ರೀ ಸೇವಾ ಸಂಸ್ಥೆ ಗಂಗಾವತಿ ರೋಟರಿ ಕ್ಲಬ್ ಸಹಯೋಗದಲ್ಲಿ ಉಚಿತ ‘ಫುಟ್ ಪಲ್ಸ್ ಥೆರಪಿ ‘ ಆರಂಭಗೊಂಡಿತು. ಬಸವ ಶ್ರೀ ಸೇವಾ ಸಂಸ್ಥೆ ಅಧ್ಯಕ್ಷ ಡಾಕ್ಟರ್ ವೆಂಕಟೇಶ್ ಸಿ ಭರಮಕ್ಕನವರ್ ಶಿಬಿರಕ್ಕೆ ಚಾಲನೆ ನೀಡಿ ಆಧುನಿಕ ಜಗತ್ತಿನ ಜೀವನ ಶೈಲಿಯಿಂದಾಗಿ ಮನುಷ್ಯ ಇಂದು ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದಾನೆ. ಅದಕ್ಕಾಗಿ ‘ ಫುಟ್ ಪಲ್ಸ್ ಥೆರಪಿ ‘ ಸ್ವದೇಶಿ ಸಂಶೋಧಿತ ವೈದ್ಯಕೀಯ ಆವಿಷ್ಕಾರ ಪ್ರಧಾನಿ ಮೋದಿಜೀ ಅವರ ಮಹತ್ವಕಾಂಕ್ಷಿ ಯೋಜನೆ ಮೇಕ್ ಇನ್ ಇಂಡಿಯಾ ಕೊಡುಗೆಯಾಗಿದೆ ಎಂದರು. ಮಧುಮೇಹ, ಅಧಿಕ ರಕ್ತದೊತ್ತಡ, ಸ್ನಾಯು ಸೆಳೆತ, ಥೈರಾಯ್ಡ್, ಬೆನ್ನು ನೋವು, ಸಂಧಿವಾತ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಪ್ರಸ್ತುತ ಥೆರಪಿ ರಾಮಬಾಣವಾಗಿದೆ. ಮಾರ್ಚ್ 19 ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಬಳ್ಳಾರಿ ರಸ್ತೆ ವಾಲ್ಮೀಕಿ ವೃತ್ತದಲ್ಲಿರುವ ಕಂಪ್ಲಿಯಲ್ಲಿ ಉಚಿತ ಶಿಬಿರ ನಡೆಯಲಿದ್ದು ಸಾರ್ವಜನಿಕರು ಈ ಶಿಬಿರದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ವಾಲಿ ಕೊಟ್ರಪ್ಪ, ಪಿ. ನಾಗೇಶ್ವರಾವ್, ಟಿ. ಆಂಜನೇಯ, ವಾಗೀಶ್ ಪಂಡಿತರಾಧ್ಯ , ವಾಸು ಕೊಳಗದ, ಡಿ. ಆರ್. ಮಂಜುನಾಥ , ಆಕಾಶ್, ಬಸವರಾಜ, ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ