ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಮೂಡಿಸಲು ಕಲಿಕಾ ಹಬ್ಬ ಸಹಕಾರಿ

ಕಲಬುರಗಿ/ ಕಮಲಾಪುರ :ಪ್ರಾಥಮಿಕ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರಹಾಕಲಿಕ್ಕೆ ಹಾಗೂ ಕಲಿಕೆಯನ್ನು ಆಸಕ್ತಿ ಮೂಡಿಸುವಲ್ಲಿ ಕಲಿಕೆಯ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಕಮಲಾಪುರ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪರಮೇಶ್ವರ್ ಓಕಳಿ ಹೇಳಿದರು.

ಶುಕ್ರವಾರ ತಾಲೂಕಿನ ನಾಗೂರು ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಮೂಲಾಕ್ಷರಗಳ ಓದು ಬರಹದ ಕೌಶಲ್ಯಗಳನ್ನು ಬೆಳೆಸಲು ಸಹ ಕಲಿಕಾ ಹಬ್ಬ ಸಹಕಾರಿಯಾಗಿದೆ, ಇತ್ತೀಚಿಗೆ ಸರಕಾರಿ ಹಾಗೂ ಅರೆ ಸರಕಾರಿ ಶಿಕ್ಷಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಈ ಹಿಂದೆ ಬಾಕಿದಾರರಾಗಿದ್ದ ಸುಮಾರು 250 ಜನರಿಗೆ ನೋಟಿಸ್ ನೀಡಲಾಗಿದ್ದು ಹೊಸ ಸದಸ್ಯತ್ವ ಆರಂಭಿಸಲಾಗಿದೆ ಚುನಾವಣೆಯಲ್ಲಿ ಸಹಕರಿಸಿದ ಕಮಲಾಪುರ ತಾಲೂಕಿನ ಎಲ್ಲಾ ಶಿಕ್ಷಕರ ಸಹಕಾರಕ್ಕೆ ಚಿರಋಣಿ ಎಂದರು.

ಬಿ ಆರ್ ಸಿ ತನುಜಾ ಮಾತನಾಡಿ ಮಕ್ಕಳಲ್ಲಿ ಕಲಿಕೆಯ ಕುರಿತು ಆಸಕ್ತಿ ಮೂಡಿಸುವುದು ಜೊತೆಗೆ ಅವರಲ್ಲಿನ ಸೃಜನಶೀಲತೆಯನ್ನು ಹೊರಹಾಕಲು ಏಳು ಚಟುವಟಿಕೆಗಳನ್ನು ಹಮ್ಮಿಕೊಂಡು ಚಟುವಟಿಕೆ ಮೂಲಕ ಕಲಿಕೆ ಮಾಡಿಸುವುದರಿಂದ ಕಲಿಕೆ ಗಟ್ಟಿಯಾಗುತ್ತದೆ, ಕಲಿಕಾ ಹಬ್ಬವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಎಲ್ಲಾ ಸಿಬ್ಬಂದಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.
ಮುಖ್ಯ ಗುರು ಸೂರ್ಯಕಾಂತ್ ಪಂಚಾಳ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ನಾಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಿರಣ ಹೊಸಮನಿ, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಿಥ್ಯಸಾಬ್ ಮುಲ್ಲಾ ,ಕಮಲಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಸುರೇಶ ಲೇಂಗಟಿ, ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿ ಮೆಹಬೂಬ್ ಮಡಕಿ, ಎಸ್ ಡಿ ಎಂ ಸಿ ಅಧ್ಯಕ್ಷ ಅರವಿಂದ ಜಡಿ, ನಾಗೂರ್ ಸರಕಾರಿ ಪ್ರೌಢಶಾಲೆಯ ಮುಖ್ಯ ಗುರು ಜಗನ್ನಾಥ್, ಆನಂದ್ ಧನ್ನಿ, ಶರಣಬಸಪ್ಪ ನಿಂಗಶೆಟ್ಟಿ ಇತರರು ಇದ್ದರು.

ವಿಶ್ವನಾಥ್ ರಾಥೋಡ ನಿರೂಪಿಸಿದರು, ಸಿ ಆರ್ ಸಿ ಹಣಮಂತ್ ಭುವಟೆ ಪ್ರಾಸ್ತವಿಕವಾಗಿ ಮಾತನಾಡಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ