ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಹಬ್ಬ ಏಕತೆಯ ಪ್ರತೀಕ : ಸಿದ್ದಪ್ಪ ಬಿದರಿ

ಬಾಗಲಕೋಟೆ/ ಹುನಗುಂದ: ಹಬ್ಬ ಜಾತ್ರೆ ಉತ್ಸವಗಳು ಏಕತೆಯ ಸಂಕೇತ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅನಕ್ಷರಸ್ಥ ಕವಿ ಸಿದ್ದಪ್ಪ ಬಿದರಿ ಅಭಿಪ್ರಾಯಪಟ್ಟರು. ಅವರು ಹುನಗುಂದ ತಾಲೂಕಿನ ಹಿರೇಮಾಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ಮಕ್ಕಳ ಬೀಳ್ಕೊಡುಗೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಮುಗ್ದ ಹಳ್ಳಿಯ ಜನರು ರಾಜಕೀಯವನ್ನು ಅತಿಯಾಗಿ ತಲೆಗೆ ಹಚ್ಚಿಕೊಳ್ಳದೆ ಚುನಾವಣೆಗೆ ಸೀಮಿತಗೊಳಿಸಿಕೊಂಡು ಮತ್ತೆ ಎಂದಿನಂತೆ ಒಂದಾಗಿ ಜೀವನ ನಡೆಸಬೇಕು. ನಮ್ಮ ದಿನ ನಿತ್ಯದ ಕಷ್ಟ ನಷ್ಟಗಳಿಗೆ ಹೆಗಲು ಕೊಡುವವರು ನಮ್ಮ ನೆರೆಹೊರೆಯವರೇ ಹೊರತು ಅಧಿಕಾರಸ್ಥ ರಾಜಕಾರಣಿಗಳಲ್ಲ ಎಂದರು.

ಟಿವಿ, ಮೊಬೈಲುಗಳಿಂದ ಮೌಲ್ಯಗಳು ಕಡಿಮೆಯಾಗುತ್ತಿವೆ, ಕೂಡು ಕುಟುಂಬಗಳು ಛಿದ್ರಗೊಳ್ಳುತ್ತಿವೆ, ಗಂಡ ಹೆಂಡತಿ, ಅತ್ತೆ ಸೊಸೆಯರ ಸಹ ಸಂಬಂಧಗಳು ಮುರಿದು ಬೀಳುತ್ತಿವೆ, ಹೆಣ್ಣುಮಕ್ಕಳು ಮಕ್ಕಳು ಸುಶಿಕ್ಷಿತರಾಗಿ ಸೌಹಾರ್ದತೆ ನೆಲೆಸುವಂತಾಗಲಿ ಎಂದು ಕರೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಅಮೀನಗಡ ಪಿಎಸ್ಐ ಜ್ಯೋತಿ ವಾಲಿಕಾರ ಮಾತನಾಡುತ್ತಾ ಮಕ್ಕಳಿಗೆ ಬಾಲ್ಯದಲ್ಲಿಯೇ ಸಂಸ್ಕಾರ ನೀಡುವ ಅಗತ್ಯವಿದೆ. ಪಾಲಕ ಪೋಷಕರ ಅತಿಯಾದ ಪ್ರೀತಿ ಮಕ್ಕಳನ್ನು ಮೊಂಡುತನಕ್ಕೆ ದೂಡುತ್ತದೆ, ಮಕ್ಕಳು ತಪ್ಪು ಮಾಡಿದಾಗ ಹೆತ್ತವರು ತಿದ್ದಿ ಬುದ್ದಿ ಹೇಳಬೇಕು. ಇಲ್ಲವಾದರೆ ಮುಗ್ಧ ಮಕ್ಕಳು ತಾವು ಮಾಡಿದ್ದೇ ಸರಿ ಎಂಬ ಮನೋಭಾವ ತಾಳಿ ಮುಂದೆ ಸಮಾಜದಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರವೀಣ್ ವಾಲೀಕಾರ ಮಾತನಾಡಿ, ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಸರಕಾರಿ ಶಾಲೆಗಳು ಅಭಿವೃದ್ಧಿ ಹೊಂದುತ್ತಿರುವುದು ಆಶಾದಾಯಕ ಬೆಳವಣಿಗೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸರಕಾರಿ ಶಾಲಾ ಮಕ್ಕಳು ಗಣನೀಯ ಸಾಧನೆ ಮಾಡುತ್ತಿರುವುದು ಮಾಧ್ಯಮಗಳ ವರದಿಯಿಂದ ತಿಳಿದು ಬರುತ್ತದೆ. ಈ ನಿಟ್ಟಿನಲ್ಲಿ ನಮ್ಮ ಶಾಲೆಯ ಮಕ್ಕಳ ಕಲಿಕೆಯ ಗುಣಮಟ್ಟವು ಉತ್ತಮವಾಗಿದ್ದು ಇಲ್ಲಿನ ಶಿಕ್ಷಕ ವರ್ಗದ ಶ್ರಮ ಶ್ಲಾಘನೀಯ ಎಂದರು.

ಕಳೆದ 25 ವರ್ಷಗಳಿಂದ ಯಾವುದೇ ಫಲಾಪೇಕ್ಷೆ ಇಲ್ಲದೆ ಗ್ರಾಮದಲ್ಲಿ ಸೇವೆ ಮಾಡುತ್ತಿರುವ ಕಾಯಕ ಜೀವಿಗಳಾದ ಕಮಲಪ್ಪ ನಾಯಕ, ಮರಿಯಪ್ಪ ಹೊಸೂರ, ಕಾಳಪ್ಪ ಬಡಿಗೇರ, ಕಮಲಮ್ಮ ದಾಸರ ಹಾಗೂ ಹಲವಾರು ದಾನಿಗಳನ್ನು ಸನ್ಮಾನಿಸಲಾಯಿತು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ಗ್ರಾಮ ಪಂಚಾಯತಿ ಅಧ್ಯಕ್ಷೆ ನೀಲವ್ವ M ಹುಲ್ಲಿಕೇರಿ, ಪ್ರೌಢಶಾಲಾ ಮುಖ್ಯ ಗುರು ಪಿ.ಎಚ್.ಪವಾರ, ನಾಗಣ್ಣ ಬಾದವಾಡಗಿ, ಸುರೇಶ ರಾಠೋಡ, ಶಂಕ್ರಪ್ಪ ಮೇಟಿ, ಮೌಲಾಸಾಬ ಚಪ್ಪರಬಂದ, ರಾಮನಗೌಡ ಕೆಸರಪೆಂಟಿ, ರಮೇಶ ಚಿತ್ತರಗಿ, ಶಿವಪ್ಪ ಕಟ್ಟಿಮನಿ, ಪಾಪಣ್ಣ ಹೂಗಾರ, ಮುಖ್ಯಗುರು ಗುರುರಾಜ ರಜಪೂತ, ಸಿಆರ್ ಪಿ ಮಹಾಂತೇಶ ಹುಲ್ಯಾಳ, ಉಪಸ್ಥಿತರಿದ್ದರು. ಮಹೇಶ ಮಾಶ್ಯಾಳ, ರಾಘವೇಂದ್ರ ವಂದಗನೂರ ನಿರೂಪಿಸಿದರು. ಸಿ ಟಿ ಪೂಜಾರಿ ವಂದಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ