ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸನ್ಮಾನ ಕಾರ್ಯಕ್ರಮ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೆಣಸಗೇರಾ ಗ್ರಾಮದ ಮಾನಸ ಗಂಗೋತ್ರಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 2024 – 2025 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಸಂಸ್ಥೆಯ ಅಧ್ಯಕ್ಷರಾದ ಶ್ರೀ ಯುತ ಯಮನೂರ ಯ. ತಳವಾರ ಇವರ ಅನುಪಸ್ಥಿತಿಯಲ್ಲಿ, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗ್ರಾಮ ದೇವತೆಯ ಆರ್ಚಕರಾದ ಶ್ರೀ ಶಂಕ್ರಪ್ಪ ಬಡಿಗೇರ ವಹಿಸಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಮತಿ ದುರುಗಮ್ಮ ಹು. ಹರಿಜನ ಗ್ರಾಮ ಪಂಚಾಯತಿ ಅಧ್ಯಕ್ಷರು ಕ್ಯಾದಿಗುಪ್ಪ, ಗ್ರಾಮದ ದಳಪತಿಯವರಾದ ಶ್ರೀ ಗೋವಿಂದ ಗೌಡ ಮಾಲಿಪಾಟೀಲ, ಶ್ರೀ ಸಣ್ಣ ದೊಡ್ಡನಗೌಡ ಮಾಲಿಪಾಟೀಲ ಗ್ರಾಮ ಪಂಚಾಯತಿ ಸದಸ್ಯರು,
ಶ್ರೀ ರಮೇಶ ಆಡಿನ್ ಎಸ್.ಡಿ.ಎಮ್.ಸಿ ಅಧ್ಯಕ್ಷರು ಮೆಣಸಗೇರಾ, ಶ್ರೀ ಮರಿಯಪ್ಪ ಹ. ಕಲಾದಗಿ ಎಸ್.ಡಿ.ಎಮ್.ಸಿ ಉಪಾಧ್ಯಕ್ಷರು ಮೆಣಸಗೇರಾ,
ಶಾಲೆಯ ಕಾರ್ಯದರ್ಶಿಗಳಾದ ರಾಮಕೃಷ್ಣ ಮ.ಕಾಲವಾಡ, ಶ್ರೀ ದೊಡ್ಡ ದೊಡ್ಡನಗೌಡ ಮಾಲಿಪಾಟೀಲ, ಎಮ್.ಎಸ್‌.ಪಾಟೀಲರು ವೇದಿಕೆ ಅಲಂಕರಿಸಿದ್ದರು.
ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮಕ್ಕೆ ಅತಿಥಿಗಳು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಂತರ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮುದ್ದು ವಿದ್ಯಾರ್ಥಿಗಳಿಗೆ ಅತಿಥಿಗಳು ಪ್ರಶಸ್ತಿ ಪತ್ರ, ಪದಕ ವಿತರಿಸಿ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಗ್ರಾಮದ ಸಮಸ್ತ ನಾಗರಿಕರು ,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪಾಲಕರು ಪೋಷಕರು ಭಾಗವಹಿಸುವ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸನ್ಮಾನಿತರು :
ಶ್ರೀ ಮತಿ ದುರುಗಮ್ಮ ಹು. ಹರಿಜನ ಗ್ರಾಮ ಪಂಚಾಯತಿ ಅಧ್ಯಕ್ಷರು ಕ್ಯಾದಿಗುಪ್ಪ,
ಶ್ರೀ ಮತಿ ಶರಣಮ್ಮ ಮ.ಬೈಲಗುಡ್ಡ ಅಂಗನವಾಡಿ ಶಾಲಾ ಶಿಕ್ಷಕಿ,
ಶ್ರೀ ಮತಿ ಲಲಿತಾಬಾಯಿ ಚವ್ಹಾಣ ಅಂಗನವಾಡಿ ಶಾಲಾ ಶಿಕ್ಷಕಿ,
ಶ್ರೀ ಮತಿ ಭುವನೇಶ್ವರಿ ಬಸವರಾಜ ಬಳಿಗಾರ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಕ್ಯಾದಿಗುಪ್ಪ,
ಶ್ರೀ ಮತಿ ಸುಮಂಗಲಾ ಜೀಗೇರಿ ಅಂಗನವಾಡಿ ಶಾಲಾ ಶಿಕ್ಷಕಿ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ