ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಮಾಜಕ್ಕೆ ಕೊಡುಗೆ ನೀಡುವ ವ್ಯಕ್ತಿತ್ವ ಬೆಳೆಸಿಕೊಳ್ಳಿ – ವಿನಯ್ ಮದರಿ

ಕೊಪ್ಪಳ : ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿಯ ಬಳಿಕ ಸಮಾಜಕ್ಕೆ ಏನಾದರೂ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ಶಿಕ್ಷಕ ವಿನಯ್ ಮದರಿ ಹೇಳಿದರು. ಸ್ಥಳೀಯ ‘ಸೃಷ್ಠಿ ಹೋಂ ಕ್ಲಾಸಸ್’ ವತಿಯಿಂದ ಏರ್ಪಡಿಸಿದ್ದ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ನಿರ್ಭಯತೆ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ನಿತ್ಯ ಅಧ್ಯಯನಶೀಲರಾಗಬೇಕು ಅಂದಾಗ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿದರು.
ವೇದಿಕೆಯ ಮೇಲೆ ಉಪಸ್ಥಿತರಿದ್ದ ಸಂಸ್ಥೆಯ ನಿರ್ದೇಶಕ ಶಿ. ಕಾ. ಬಡಿಗೇರ ಮಾತನಾಡಿ ಓದು ಸರ್ವಸ್ವವನ್ನೇ ತಂದು ಮುಂದಿಡುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಗಮನಹರಿಸಲು ತಿಳಿ ಹೇಳಿದರು.

ಶಿಕ್ಷಕಿ ಅಕ್ಕಮ್ಮ ಸಾಲ್ಮನಿ ಮಾತನಾಡುತ್ತಾ ಯಾವುದೇ ವಿಷಯ ತಲೆಯಲ್ಲಿ ಉಳಿಯಬೇಕೆಂದರೆ ನಿತ್ಯ ಮನನ ಮಾಡುವುದು ಉತ್ತಮವೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮತ್ತೊಬ್ಬ ಅತಿಥಿ ಮಾರುತಿ ಮಾತನಾಡಿ ನಿರಂತರ ಪ್ರಯತ್ನ ಒಂದು ಯಶಸ್ಸನ್ನು ತಂದುಕೊಡುವಲ್ಲಿ ಸಫಲವಾಗುತ್ತದೆ ಎಂದರು.
ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯಾಗಿ ಪರೀಕ್ಷಾ ಪ್ಯಾಡು ಹಾಗೂ ಪೆನ್ನುಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿನಿ ಕು. ಶಾರದಾ ಮಗಜಿ ಸ್ವಾಗತಿಸಿದರು.
ವಿದ್ಯಾರ್ಥಿನಿ ಐಶ್ವರ್ಯ ಕಾರ್ಯಕ್ರಮ ನಿರೂಪಿಸಿರು. ಕೊನೆಯಲ್ಲಿ ಕುಮಾರಿ ಚೇತನಾ ವಂದಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ