ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಂಪ್ಲಿಯಿಂದ ಕುರುಗೋಡಿಗೆ ಶಾಸಕ ಜೆ.ಎನ್. ಗಣೇಶ್ ಸಂಕಲ್ಪ ಪಾದಯಾತ್ರೆ

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಹಾಗೂ ಕುರುಗೋಡು ಭಾಗದಲ್ಲಿ ಅತ್ಯಂತ ದೊಡ್ಡ ಜಾತ್ರೆಯಲ್ಲಿ ಒಂದಾದ ಕುರುಗೋಡು ಶ್ರೀ ದೊಡ್ಡ ಬಸವೇಶ್ವರ ಜಾತ್ರೆಯ ಪ್ರಯುಕ್ತ ಕಂಪ್ಲಿ ಶಾಸಕರಾದ ಜೆಎನ್ ಗಣೇಶ್ ಅವರು ನಾಲ್ಕನೇ ವರ್ಷದ ಸಂಕಲ್ಪ ಪಾದಯಾತ್ರೆಯನ್ನು ನಡೆಸಿದರು.
ಕಂಪ್ಲಿ ಪಟ್ಟಣದ ಆರಾಧ್ಯ ದೈವ ಶ್ರೀ ಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಸಂಕಲ್ಪ ಪಾದಯಾತ್ರೆಯನ್ನು ಆರಂಭಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ J.N. ಗಣೇಶ್ ಅವರು ಕಳೆದ ಮೂರು ವರ್ಷಗಳಿಂದ ಕಂಪ್ಲಿ ಕ್ಷೇತ್ರದಲ್ಲಿ ಹಾಗೂ ನಾಡಿನಲ್ಲಿ ಸಮೃದ್ಧ ಮಳೆಯಾಗಲಿ ಉತ್ತಮ ಬೆಳೆಯಾಗಿ ಅನ್ನದಾತರು ಚೆನ್ನಾಗಿರಲಿ ಎಂದು ನಾಡಿನಲ್ಲಿ ಸುಭಿಕ್ಷ ನೆಲಸಲಿ ಪ್ರತಿಯೊಬ್ಬರಲ್ಲಿಯೂ ಶಾಂತಿ ನೆಮ್ಮದಿ ನೆಲೆಸಲಿ ಎಂದು ಸಂಕಲ್ಪ ಮಾಡಿ ಪಾದಯಾತ್ರೆ ಮಾಡುತ್ತಿದ್ದೇನೆ, ನನ್ನೊಂದಿಗೆ ಕ್ಷೇತ್ರದ ಜನತೆಯು ಭಾಗವಹಿಸುತ್ತಿದ್ದು ಕಳೆದ ವರ್ಷ ಉತ್ತಮ ಮಳೆಯಾಗಿತ್ತು ಆದರೆ ರೈತರು ಬೆಳೆದ ಬೆಳಗ್ಗೆ ಉತ್ತಮ ಬೆಲೆ ದೊರಕುವಂತಾಗಬೇಕು ಸಾರ್ವಜನಿಕರು ನೆಮ್ಮದಿಯ ಜೀವನ ನಡೆಸಲಿ ಎಂದು ಶ್ರೀ ಪೇಟೆ ಬಸವೇಶ್ವರ ಮತ್ತು ಕುರುಗೋಡು ಶ್ರೀ ದೊಡ್ಡ ಬಸವೇಶ್ವರರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು. ನಂತರ ಕಂಪ್ಲಿ, ಕೊಟ್ಟಲ್ , ನೆಲುಡಿ ಕೊಟ್ಟಾಲ್, ಎಮಿಗನೂರು ಮುಖಾಂತರ ಕುರುಗೋಡಿಗೆ ಪಾತ್ರೆಯಾತ್ರೆ ನಡೆಸಿದರು.
ಶಾಸಕರೊಂದಿಗೆ ನೂರಾರು ಮುಖಂಡರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದು ಪ್ರತಿಯೊಂದು ಗ್ರಾಮದಲ್ಲಿ ಶಾಸಕರು ಪಾದಯಾತ್ರೆ ಮೂಲಕ ಆಗಮಿಸಿದಾಗ ಪಟಾಕಿ ಸಿಡಿಸಿ ಸಿಹಿ ವಿತರಿಸಿ ಪಾನಕ ಮಜ್ಜಿಗೆ ನೀಡಿ ಸಾರ್ವಜನಿಕರು ಸ್ವಾಗತ ಕೋರಿ ಶುಭ ಹಾರೈಸಿದರು. ದಾರಿ ಉದ್ದಕ್ಕೂ ಪಾದಯಾತ್ರೆಗಳ ಸಾಲು ಅತ್ಯಂತ ಭಕ್ತಿ ಭಾವದಿಂದ ಕೂಡಿತ್ತು. ಕುರುಗೋಡು ಶ್ರೀ ದೊಡ್ಡ ಬಸವೇಶ್ವರ ಜಾತ್ರೆಗೆ ಕೇವಲ ಬಳ್ಳಾರಿ ಜಿಲ್ಲೆಯೊಂದೇ ಅಲ್ಲ ನೆರೆಹೊರೆಯ ಅನ್ಯ ರಾಜ್ಯಗಳಿಂದಲೂ ಹಾಗೂ ಜಿಲ್ಲೆಗಳಿಂದಲೂ ಭಕ್ತರು ಬರುತ್ತಿರುವುದು ಕಂಡುಬಂತು ಅದರಲ್ಲೂ ಕೊಪ್ಪಳ ಜಿಲ್ಲೆಯ ವಿವಿಧ ತಾಲೂಕುಗಳ ಭಕ್ತರು ಕಂಪ್ಲಿ ಮೂಲಕವಾಗಿ ಕುರುಗೋಡಿಗೆ ಪಾದಯಾತ್ರೆಯ ಮೂಲಕ ಸಾಗಿದರು. ಗ್ರಾಮದಿಂದಲೇ ಪಾದಯಾತ್ರೆಗಳಿಗೆ ಜಾತ್ರೆ ತೆರಳುವವರಿಗೆ ಅನೇಕ ಭಕ್ತರು ರಸ್ತೆ ಯುದ್ಧಕ್ಕೂ ಪಾದಯಾತ್ರೆಗಳಿಗೆ ಉಪಹಾರ , ತಂಪು ಪಾನೀಯ, ಮಜ್ಜಿಗೆ ಉಚಿತವಾಗಿ ವಿತರಿಸುತ್ತಿರುವುದು ಕಂಡುಬಂತು ಜೊತೆಗೆ ಅಲ್ಲಲ್ಲಿ ಭಕ್ತರಿಗೆ ಊಟದ ವ್ಯವಸ್ಥೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಹ ಮಾಡಿರುವುದು ಕಂಡು ಬಂತು. ರಸ್ತೆ ಉದ್ದಕ್ಕೂ ಮಹಿಳೆಯರು, ಪುರುಷರು ಮಕ್ಕಳು ಸಾವಿರಾರು ಸಂಖ್ಯೆಯಲ್ಲಿ ಪಾದಯಾತ್ರೆ ಮೂಲಕ ತೆರಳುತ್ತಿರುವುದು ಕಂಡು ಬಂದರೆ ಇನ್ನೂ ಕೆಲವು ರೈತರು ತಮ್ಮ ಎತ್ತುಗಳನ್ನು ಶೃಂಗರಿಸಿಕೊಂಡು ಚಕ್ಕಡಿಗಳ ಮೂಲಕ ತೆರಳುತ್ತಿರುವುದು ಕಂಡುಬಂತು.

ವರದಿ : ಜಿಲಾನ್ ಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ