ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪುನೀತ್ ರಾಜಕುಮಾರ ಸಮಾಜಮುಖಿ ಸೇವೆ ಅನನ್ಯ : ಪೇಂಟರ್ ಉಪ್ಪಿರಾಜ

ಬಳ್ಳಾರಿ / ಕಂಪ್ಲಿ : ಸ್ಥಳೀಯ ಮಹಾತ್ಮಗಾಂಧಿ ವೃತ್ತದಲ್ಲಿರುವ ಆಟೋ ನಿಲ್ದಾಣ ಬಳಿಯಲ್ಲಿ ದಿ. ಡಾ.ಪುನೀತ್ ರಾಜಕುಮಾರ ಅವರ 50ನೇ ವರ್ಷದ ಜನ್ಮದಿನದ ಅಂಗವಾಗಿ ಪುನೀತ್ ರಾಜಕುಮಾರ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ಸೋಮವಾರ ವಿತರಿಸಲಾಯಿತು.
ಅಭಿಮಾನಿ ಪೇಂಟರ್ ಉಪ್ಪಿರಾಜ ಮಾತನಾಡಿ, ಸಮಾಜಕ್ಕಾಗಿ ಸಲ್ಲಿಸಿದ ಸೇವೆ, ಸಂಕಷ್ಟದಲ್ಲಿದ್ದವರಿಗೆ ತಾವು ಮಾಡಿದ ಸಹಾಯವನ್ನು ಯಾರೊಬ್ಬರ ಬಳಿಯೂ ಹೇಳಿಕೊಳ್ಳದ ಮೇರು ವ್ಯಕ್ತಿತ್ವ ಪುನೀತ್, ರಾಜ್‌ಕುಮಾರ್ ಅವರದ್ದಾಗಿತ್ತು’. ಪುನೀತ್ ನಾಡಿನ ಶಕ್ತಿ. ಮಾನವೀಯತೆಯ ಗುಣಗಳನ್ನು ಹೊಂದಿದ್ದ ಮಹಾನ್ ಚೇತನ. ಚಿಕ್ಕವಯಸ್ಸಿನಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದವರು, ಚಿತ್ರರಂಗ ಹಾಗೂ ಸಾಮಾಜಿಕವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರಿಲ್ಲದ ಕರುನಾಡು ಬಡವಾಗಿದೆ’. ವೃದ್ಧಾಶ್ರಮ, ಅನಾಥಾಲಯ, ಮಕ್ಕಳ ಶಿಕ್ಷಣಕ್ಕೆ ನೆರವು ನೀಡಿ ಜನ ಸೇವೆಯನ್ನು ಸದ್ದಿಲ್ಲದೆ ಮಾಡಿದ ಪುನೀತ್ ಸಾವಿನ ನೋವಿನ ಛಾಯೆಯಿಂದ ಹೊರ ಬರಲಾಗುತ್ತಿಲ್ಲ. ಪುನೀತ್ ಅವರ ಸೇವೆ ಅನನ್ಯವಾಗಿದೆ. ಅವರ ಮಾರ್ಗದರ್ಶನದಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡೋಣ ಎಂದರು.
ಈ ಸಂದರ್ಭದಲ್ಲಿ ಅಭಿಮಾನಿಗಳಾದ ಸಿಂಹಾದ್ರಿ, ಆಕಾಶ, ಮಸ್ತಾನ್, ವಿ.ವೆಂಕಟೇಶ, ಹೊನ್ನೂರಸ್ವಾಮಿ, ಅಶೋಕ, ರಮೇಶ, ಕೆ.ರಿಯಾನ್, ಕೆ.ಮಹಾಭಾಷಾ, ದಾದು, ಕುಮಾರ, ನಾಗರಾಜ ಸೇರಿದಂತೆ ಮಕ್ಕಳು ಇದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ