ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಿಸಿಎಂ ಹಾಸ್ಟೆಲ್ ನಲ್ಲಿ ಬೀಳ್ಕೊಡುಗೆ ಸಮಾರಂಭ

ಜ್ಞಾನವೇ ಜಗತ್ತನ್ನು ಆಳುತ್ತದೆ: ವೀರೇಶ ಗೋನವಾರ

ರಾಯಚೂರು/ ಸಿಂಧನೂರು :
ಜ್ಞಾನದಿಂದ ಮಾತ್ರ ವಿದ್ಯಾರ್ಥಿ-ಯುವಕರು ತಮ್ಮ ಜೀವನದಲ್ಲಿ ಮುಂದೆ ಬರಬಹುದು, ಜ್ಞಾನವೇ ಜಗತ್ತನ್ನು ಆಳುತ್ತದೆ ಎಂದು ಇಂಗ್ಲೀಷ್ ಭಾಷಾ ಶಿಕ್ಷಕ ವೀರೇಶ ಗೋನವಾರ ಹೇಳಿದರು.
ಅವರು ನಗರದ ಬಿಸಿಎಂ ಇಲಾಖೆಯ ದೇವರಾಜ್ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಹಮ್ಮಿಕೊಂಡಿದ್ದ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡುತ್ತ, ನಿಮ್ಮ ಬಗ್ಗೆ ತಂದೆ ತಾಯಿಗಳು ಹಾಗೂ ಗುರುಗಳು ಇಟ್ಟಿರುವ ಭರವಸೆಯನ್ನು ಕಳೆದುಕೊಳ್ಳದೇ ಉತ್ತಮ ಫಲಿತಾಂಶವನ್ನು ಪಡೆಯುವ ಮೂಲಕ ಅವರಿಗೆ ಕೀರ್ತಿ ತರಬೇಕು. ಉತ್ತಮ ವಿದ್ಯಾಭ್ಯಾಸವನ್ನು ಮಾಡಿ ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು, ಜೀವನದಲ್ಲಿ ಉತ್ತಮ ಜ್ಞಾನದ ಜೊತೆಗೆ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ನಿಮ್ಮ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ವಸತಿ ನಿಲಯದ ವಾರ್ಡನ್ ಬಾಬು ಹಸಮಕಲ್ ಮಾತನಾಡಿ, ಸರ್ಕಾರಗಳು ನೀಡುವ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಜೀವನವನ್ನು ನಿಮ್ಮದಾಗಿಸಿಕೊಳ್ಳಬೇಕು. ವಿದ್ಯಾರ್ಥಿಯ ಜೀವನ ಬಂಗಾರದಂತಹ ಜೀವನ ಇದನ್ನು ತಾವು ಅರ್ಥ ಮಾಡಿಕೊಂಡು ವಿದ್ಯಾಭ್ಯಾಸವನ್ನು ಮಾಡಿ ಮುಂದೆ ಬರಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಾದ ಚಿರಂಜೀವಿ, ಮಹೇಶ, ನವೀನ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವೇದಿಕೆ ಮೇಲೆ ಮೆಟ್ರಿಕ್ ನಂತರದ ವಸತಿ ನಿಲಯದ ವಾರ್ಡನ್ ಲೋಕೇಶ್ ರಾಥೋಡ್, ಸಿಬ್ಬಂದಿಗಳಾದ ಗೋಪಿ, ಇಮಾಮ್ ಹುಸೇನ್ ಎತ್ಮಾರಿ, ವಿಜಯಕುಮಾರ್ , ಅಬ್ದುಲ್ ಸಿರಾಜ್, ದ್ಯಾಮಣ್ಣ, ಶಿವಲಿಂಗ ಕೊಡ್ಲಿ ಸೇರಿದಂತೆ ಹಾಸ್ಟೆಲ್ ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ