ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶೇಷ ಚೇತನರಿಗೆ ಸಾಧನಾ ಸಲಕರಣೆ ವಿತರಣೆ

ಬಳ್ಳಾರಿ / ಕಂಪ್ಲಿ : ಇಲ್ಲಿನ ರಾಮಸಾಗರ ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್ ವತಿಯಿಂದ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ, ಗ್ರಾಮೀಣ ಪ್ರದೇಶದ ವಿಶೇಷ ಚೇತನರಿಗೆ ಉಚಿತ ಪರಿಕರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ದಿನ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ದಾಸರ ಹನುಮಕ್ಕ, ದಾಸರ ರಾಮಚಂದ್ರಪ್ಪ, ಪೂಜಾರಿ ಶಿವಣ್ಣ, ಹನುಮಸಾಗರ ಬಾಳಪ್ಪ ಹಾಗೂ ಹರಿನಾಥ P ಎಂಬ ಐವರು ವಿಶೇಷ ಚೇತನರನ್ನು ಆಯ್ಕೆ ಮಾಡಲಾಗಿತ್ತು. ಅವರು ಬೇಡಿಕೆ ಸಲ್ಲಿಸಿದ ವೀಲ್‌ಚೇರ್, U- ಶೇಪ್ ವಾಕರ್, ಸಿಂಗಲ್ ಹ್ಯಾಂಡ್ ಸ್ಟಿಕ್, ವಾಟರ್ ಬೆಡ್ ಮುಂತಾದ ಪರಿಕರಗಳಿಗೆ ಪೂಜ್ಯರ ಮಂಜೂರಾತಿ ದೊರಕಿದ್ದು, ಶ್ರೀಯುತ ರೋಹಿತಾಕ್ಷ್ (ಬಳ್ಳಾರಿ ಜಿಲ್ಲಾ ಗೌರವಾನ್ವಿತ ನಿರ್ದೇಶಕರು) ಫಲಾನುಭವಿಗಳಿಗೆ ಪರಿಕರ ವಿತರಿಸಿದರು.

ಕಾರ್ಯಕ್ರಮದಲ್ಲಿ ರಾಮಸಾಗರ ಸರ್ಕಾರಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶ್ರೀಯುತ ಅರುಣ್ ಕುಮಾರ್, VRW ಅಧ್ಯಕ್ಷ ಮಲ್ಲಿಕಾರ್ಜುನ, ಯೋಜನಾಧಿಕಾರಿ ಹಾಲಪ್ಪ M, ಕೃಷಿ ಅಧಿಕಾರಿ ಸಂಜುಕುಮಾರ್, ವಲಯ ಮೇಲ್ವಿಚಾರಕಿ ಜಯಲಕ್ಷ್ಮಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಖಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಮಾರ್ಗದರ್ಶನ ನೀಡಿದರು.
ಸ್ವ-ಸಹಾಯ ಸಂಘದ ಸದಸ್ಯರು, ಸೇವಾ ಪ್ರತಿನಿಧಿಗಳಾದ ಪರಶುರಾಮ್, ರಮೇಶ್, ಶೈಲಜಾ, ಅನ್ನಪೂರ್ಣ, ವಿನೋದ ಹಾಗೂ ಇತರ ಗ್ರಾಮಸ್ಥರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ