ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್.ಎಸ್.ಎಲ್.ಸಿ ಪರೀಕ್ಷೆ. ಇಂದು ಶೇ. 97 ಹಾಜರು: ಬಿಇಒ ರಾಜು

ರಾಯಚೂರು/ ಸಿಂಧನೂರು :
ಇಂದಿನಿಂದ ಆರಂಭವಾಗಿರುವ ಪ್ರಸ್ತುತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಆರಂಭವಾಗಿದ್ದು ಇಂದು ನಡೆದ ಪ್ರಥಮ ಭಾಷೆಗಳ ಪರೀಕ್ಷೆಯಲ್ಲಿ ಶೇ,97ರಷ್ಟು ವಿದ್ಯಾರ್ಥಿಗಳ ಹಾಜರಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್.ರಾಜು ತಿಳಿಸಿದ್ದಾರೆ.
ತಾಲೂಕಿನಾದ್ಯಂತ ನಗರದಲ್ಲಿ 5 ಪರೀಕ್ಷಾ ಕೇಂದ್ರಗಳು ಮತ್ತು ಗ್ರಾಮಾಂತರ ಪ್ರದೇಶದಲ್ಲಿ 14 ಸೇರಿ ಒಟ್ಟು 19 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ಈ ದಿನದ ಪರೀಕ್ಷೆಗೆ 5696 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 5499 ವಿದ್ಯಾರ್ಥಿಗಳು ಹಾಜರಾದರೆ, 197 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಎಲ್ಲಾ ಪರೀಕ್ಷೆ ಕೇಂದ್ರಗಳಲ್ಲಿ ಅಳವಡಿಸಿದ 269ಕ್ಕೂ ಸಿಸಿ ಕ್ಯಾಮೆರಾಗಳಲ್ಲಿ ವೆಬ್ ಕ್ಯಾಸ್ಟಿಂಗ್ ಮೂಲಕ ಜಿಲ್ಲಾ ಕೇಂದ್ರದ ಕಂಟ್ರೋಲ್ ರೂಮ್‌ನಲ್ಲಿ ನೇರವಾಗಿ ನಿಯೋಜಿತ ತಂಡಗಳು ವೀಕ್ಷಣೆ ಮಾಡುತ್ತಿವೆ.
ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷೆಯ ಚಲನ-ವಲನಕ್ಕೆ ನೇಮಕಗೊಂಡ 5-ಜಿಲ್ಲಾ ಜಾಗೃತದಳಗಳು, 3-ತಾಲೂಕಾ ಜಾಗೃತದಳ, 19-ಸ್ಥಾನಿಕ ಅಧಿಕಾರಿಗಳು, 19-ಮೊಬೈಲ್ ಸ್ವಾಧೀನ ಅಧಿಕಾರಿಗಳು, ಮುಖ್ಯ ಅಧೀಕ್ಷಕರು, ಉಪ ಅಧೀಕ್ಷಕರರು ಕಸ್ಟೋಡಿಯನ್ ಸೇರಿದಂತೆ 45 ಸಿಬ್ಬಂದಿಗಳು ಇಂದು ಕಾರ್ಯನಿರ್ವಹಿಸಿದರು ಎಂದು ಎಸ್.ಎಸ್.ಎಲ್.ಸಿ ತಾಲೂಕಾ ನೋಡಲ್ ಅಧಿಕಾರಿ ಹಾಗೂ ಶಿಕ್ಷಣ ಸಂಯೋಜಕರಾದ ಅಮರೇಶ ತಿಳಿಸಿದರು.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪೊಲೀಸ್ ಬಂದೋಬಸ್ತನ್ನು ವದಗಿಸಲಾಗಿತ್ತು. ಇಂದು ಶಾಂತಿ-ಸುವ್ಯವಸ್ಥೆಯಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಡೆದವು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ