ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭ್ರಷ್ಟ ಅಧಿಕಾರಿಗಳ ಅಮಾನತ್ತಿಗೆ ಆಗ್ರಹಿಸಿ ಮನವಿ ಸಲ್ಲಿಕೆ

ಬೆಳಗಾವಿ /ಬೈಲಹೊಂಗಲ: ಕರ್ನಾಟಕ ಅಂಬೇಡ್ಕರ್ ಯುವ ಸೇನೆ ವತಿಯಿಂದ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕ ತಹಶೀಲ್ದಾರ್ ಕಾರ್ಯಾಲಯದಲ್ಲಿರುವ ಗ್ರೇಡ್ 2 ತಹಶೀಲ್ದಾರ ವ್ಯಾಪ್ತಿಯಲ್ಲಿ ಬರುವ ದಾಖಲಾತಿಗಳನ್ನು ಮಂಜೂರು ಮಾಡಲು ಫಲಾನುಭವಿಗಳು ನೀಡಿದ ಅರ್ಜಿಯನ್ನು ಕಾಯ್ದಿರಿಸಿ ಅರ್ಜಿದಾರರು ಬಂದು ಅರ್ಜಿಯನ್ನು ಪರಿಶೀಲಿಸಿ ಕೇಳಿದಾಗ ಅರ್ಜಿಯ ಜೊತೆ ಹಣ ನೀಡುವುದಾದರೆ ಮತ್ತೊಂದು ಬಾರಿ ಅರ್ಜಿ ಸಲ್ಲಿಸಿ ಮಂಜೂರು ಮಾಡೋಣ ಎಂದು ಪ್ರತಿ ಅರ್ಜಿಗೆ ರಾಜಾ ರೋಷವಾಗಿ ಹಣ ಕೇಳಿ ಪಡೆಯುತ್ತಾ ಸಾಗಿದ್ದಾರೆ ಈ ವಿಷಯ ಮೇಲಾಧಿಕಾರಿಗಳ ಗಮನಕ್ಕೆ ಬಂದರೂ ಸುಮ್ಮನಿರುವ ಪರಿಸ್ಥಿತಿ ಎದುರಾಗಿದೆ ಆದ್ದರಿಂದ ಮೇಲಾಧಿಕಾರಿಗಳು ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಕೂಡಲೇ ಅಮಾನತುಗೊಳಿಸಬೇಕೆಂದು ಮಾನ್ಯ ತಹಶೀಲ್ದಾರ್ ಅವರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಘಟನೆ ರಾಜ್ಯ ಉಪಾಧ್ಯಕ್ಷರಾದ ಪರಶುರಾಮ ರಾಯಬಾಗ ಮಾತನಾಡಿ ತಾಲೂಕು ತಹಶೀಲ್ದಾರ ಕಚೇರಿಯಲ್ಲಿ ಭ್ರಷ್ಟ ಲಂಚಾವತಾರ ಉಕ್ಕಿ ಹರಿಯುತ್ತಿದ್ದರೂ ಉನ್ನತ ಅಧಿಕಾರಿಗಳು ಈ ವಿಷಯವಾಗಿ ಕೂಡಲೇ ಗಮನಹರಿಸಿ ಕ್ರಮ ಕೈಗೊಂಡು ಅವರನ್ನು ಅಮಾನತುಗೊಳಿಸಬೇಕು ಇಲ್ಲವಾದಲ್ಲಿ ಈ ವಿಷಯವಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದರು. ಈ ಸಂದರ್ಭದಲ್ಲಿ ಸಂಘಟನೆ ಪದಾಧಿಕಾರಿಗಳಾದ ಭೀಮಪ್ಪ ಮಾದರ್, ದುರ್ಗಪ್ಪ ಚಿಕ್ಕನವರ್, ಮಂಜು ಮಾದರ್, ಸಂತೋಷ ಮಾದರ್, ಹಾಗೂ ಆತ್ಮಾನಂದ ಮಾದರ್ ಉಪಸ್ಥಿತರಿದ್ದರು.

  • ಮಂಜು ಎಂ.ಚಿಕ್ಕಣ್ಣವರ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ