ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಐಶ್ವರ್ಯಾಗೆ ದ್ವಿತೀಯ ಸ್ಥಾನ

ಬಾಗಲಕೋಟೆ/ ಹುನಗುಂದ: ಸಮೀಪದ ವಡಗೇರಿ ಗ್ರಾಮದ ಐಶ್ವರ್ಯಾ ಮಾರೆನ್ನವರ ಅವರು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ.
ಎಂ ಎಸ್ ಸಿ ಪ್ರಾಣಿಶಾಸ್ತ್ರ ಅಧ್ಯಯನ (Zoology ) ಸ್ನಾತಕೋತ್ತರ ಪದವಿಯಲ್ಲಿ ಐಶ್ವರ್ಯ ಈ ಸಾಧನೆ ಮಾಡಿದ್ದಾರೆ.
ಸರಕಾರಿ ಕೋಟಾದಡಿ ವಿದ್ಯಾಸಂಗಮ, ಭೂತರಾಮನಹಟ್ಟಿ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಮೇನ್ ಕ್ಯಾಂಪಸ್ ಗೆ ಆಯ್ಕೆಯಾಗಿದ್ದ ಐಶ್ವರ್ಯ 2023-24 ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಅಂತಿಮ ಪರೀಕ್ಷೆಯಲ್ಲಿ ಶೇ 80.42 ಅಂಕ ಪಡೆದು ವಿಶ್ವವಿದ್ಯಾಲಯದ ರ್ಯಾಂಕ್ ವಿಜೇತರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಪ್ರಾಣಿಗಳ ದೇಹರಚನೆ, ವರ್ತನೆ, ಬೆಳವಣಿಗೆ, ವರ್ಗೀಕರಣ ಮತ್ತು ಅವುಗಳ ಮನೋವಿಜ್ಞಾನ ಕುರಿತು ಸಾಕಷ್ಟು ಆಸಕ್ತಿ ಹೊಂದಿದ್ದ ಐಶ್ವರ್ಯ ತನ್ನ ಇಷ್ಟದ ಕೋರ್ಸ್ ಆಯ್ಕೆ ಮಾಡಿಕೊಂಡು ಗಮನಾರ್ಹ ಸಾಧನೆ ಮಾಡಿದ್ದಾಳೆ. ಪ್ರಾಥಮಿಕ ಶಾಲಾ ಶಿಕ್ಷಕ ದಂಪತಿಗಳಾದ ಎನ್ ಎಚ್ ಮಾರೆನ್ನವರ ಮತ್ತು ಶಾಂತಾಬಾಯಿ ಯವರ ಸುಪುತ್ರಿ ಐಶ್ವರ್ಯಳ ಈ ಸಾಧನೆಗೆ ಇಳಕಲ್ಲ ಹಾಗೂ ಹುನಗುಂದ ತಾಲೂಕಿನ ಶಿಕ್ಷಕ ವರ್ಗ ಅಭಿನಂದನೆ ಸಲ್ಲಿಸಿದೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ