ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣ ಕ್ಷೇತ್ರ ಪಾತ್ರ ಪ್ರಮುಖವಾಗಿದೆ : ನಿರ್ದೇಶಕ ರೋಹಿತಾಕ್ಷ

ಬಳ್ಳಾರಿ / ಕಂಪ್ಲಿ : ಎಮ್ಮಿಗನೂರು ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜ್ಞಾನ ದೀಪ ಕಾರ್ಯಕ್ರಮಡಿಯಲ್ಲಿ ಶಿಕ್ಷಕರನ್ನು ಒದಗಿಸಿದ ಸಂಸ್ಥೆಯ ಅಧಿಕಾರಿಗಳಿಗೆ ಅಭಿನಂದಿಸಲಾಯಿತು.
ಈ ವೇಳೆ ಮುಖ್ಯ ಗುರು ಬಿಎಸ್ ಸತ್ತೋಜಾತಪ್ಪ ಮಾತನಾಡಿ ಎಮ್ಮಿಗನೂರು ಕ್ಲಸ್ಟರ್ ನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಧರ್ಮಸ್ಥಳ ಸಂಸ್ಥೆಯಿಂದ ಗೌರವ ಶಿಕ್ಷಕರನ್ನು ಒದಗಿಸಿದ್ದು ಮಕ್ಕಳ ಪಾಠ ಪ್ರವಚನಕ್ಕೆ ತುಂಬಾ ಸಹಕಾರಿಯಾಯಿತು. ಇದೇ ರೀತಿಯ ಕಾರ್ಯಗಳು ಶಿಕ್ಷಣದ ದೃಷ್ಟಿಯಿಂದ ಮುಂದುವರೆಯಲಿ ಹಾಗೆ ಮುಂದಿನ ಶೈಕ್ಷಣಿಕ ವರ್ಷದಲ್ಲೂ ಕೂಡ ಹೆಚ್ಚುವರಿ ಆಗಿ ಶಿಕ್ಷಕರ ನೀಡುವುದರ ಮುಖಾಂತರ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸಹಕರಿಸಬೇಕು ಎಂದರು.
ನಂತರ ನಿರ್ದೇಶಕ ರೋಹಿತಾಕ್ಷ ಮಾತನಾಡಿ ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣ ಕ್ಷೇತ್ರ ಪಾತ್ರ ಪ್ರಮುಖವಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮ ಶಿಕ್ಷಣ ಪಡೆಯುವ ಮೂಲಕ ದೇಶಕ್ಕೆ ತಮ್ಮದಾಗಿರತಕ್ಕಂತಹ ಕೊಡುಗೆಯನ್ನು ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಸಿಆರ್‌ಪಿ ಸ್ವಯಂ ಪ್ರಭ ಯೋಜನಾಧಿಕಾರಿ ಹಾಲಪ್ಪ ಸಮನ್ವಯ ಅಧಿಕಾರಿ ರೇಖಾ ಮೇಲ್ವಿಚಾರಕ ಮಂಜುನಾಥ್ ಶಿಕ್ಷಕರಾದ ಪಾಂಡುರಂಗ ಶಿವನಗೌಡ ರಾಮಪ್ಪ ಲೋಕೇಶ್ ಮಂಜುನಾಥ್ ಸೇವಾ ಪ್ರತಿನಿಧಿಗಳಾದ ಲಕ್ಷ್ಮಿ, ಶಾಹಿದ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ