ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವನಸಿರಿ ಫೌಂಡೇಷನ್ ನಿಂದ ವಿಶ್ವ ಜಲ ದಿನಾಚರಣೆ ಅಂಗವಾಗಿ ಪಕ್ಷಿಗಳಿಗೆ ಕುಡಿಯುವ ನೀರಿನ ಅರವಟ್ಟಿಗೆ ಅಭಿಯಾನ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬೊಮ್ಮನಾಳ (ಇ.ಜೆ) ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಸಿರಿ ಫೌಂಡೇಷನ್(ರಿ.) ರಾಯಚೂರು ಹಾಗೂ ನಿಸರ್ಗ ಯುಕೋ ಕ್ಲಬ್ ವತಿಯಿಂದ ವಿಶ್ವ ಜಲ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಕಾರ್ಯಕ್ರಮ ಹಾಗೂ ಪಕ್ಷಿಗಳಿಗೆ ದಾಹ ತೀರಿಸಲು ಹಕ್ಕಿ ಪಕ್ಷಿಗಳಿಗೆ ಗುಟುಕು ನೀರಿನ ಅರವಟ್ಟಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ವಿಶ್ವ ಜಲದಿನದ ಅಂಗವಾಗಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತ ವನಸಿರಿ ಅಮರೇಗೌಡ ಮಲ್ಲಾಪುರ ಸಸಿ ನೆಟ್ಟು ನಿರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪರಿಸರ ಪ್ರೇಮಿ ನಾಗರಾಜ ಬೊಮ್ಮನಾಳ ಮಾತನಾಡಿ ವನಸಿರಿ ಪೌಂಡೇಷನ್ ಕಲ್ಯಾಣ ಕರ್ನಾಟಕವನ್ನು ಹಸಿರುಗೊಳಿಸುವ ಗುರಿಯನ್ನು ಹೊಂದಿದ್ದು,ಈ ಭಾಗದ ಜಿಲ್ಲೆ ತಾಲೂಕು, ಗ್ರಾಮಗಳಲ್ಲಿ ಪರಿಸರ ಜಾಗೃತಿ ಅಂಗವಾಗಿ ಈಗಾಗಲೇ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಪ್ರತಿ ವರ್ಷ ಪ್ರತಿ ದಿನ ಪ್ರತಿ ನಿತ್ಯ ಈ ಭಾಗದಲ್ಲಿ ಅತ್ಯದ್ಭುತ ಕಾರ್ಯಕ್ರಮ ಮಾಡುತ್ತಾ ಬಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಬಿಸಿಲಿನ ತಾಪದಿಂದ ನರಳುವ ಜನರಿಗೆ ನೆರಳು ಕೊಡುವ ಒಂದು ಸಂಕಲ್ಪಕ್ಕೆ ನಾವುಗಳೆಲ್ಲರೂ ಕೈ ಜೋಡಿಸುವ ಮೂಲಕ ಅಮರೇಗೌಡ ಮಲ್ಲಾಪುರ ಕೈ ಬಲಪಡಿಸೋಣ ಎಂದರು.

ವನಸಿರಿ ತಂಡ ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ದಾಹ ತೀರಿಸಲು ಪಕ್ಷಿಗಳಿಗೆ ಅರವಟ್ಟಿಗೆ ಕಾರ್ಯಕ್ರಮ ಮಾಡಲಾಗುತ್ತಿದೆ. ಪ್ರಾಣಿ ಪಕ್ಷಿಗಳನ್ನು ಮುಂದಿನ ಪೀಳಿಗೆಗೆ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಇದು ಕೇವಲ ವನಸಿರಿ ಪೌಂಡೇಷನ್ ಕಾರ್ಯ ಅಲ್ಲ ಪ್ರತಿಯೊಬ್ಬರೂ ಮಾಡುವ ಕರ್ತವ್ಯ.ಇದಕ್ಕೆ ಎಲ್ಲಾ ವಿದ್ಯಾರ್ಥಿಗಳು ಕೈಜೋಡಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ಪಕ್ಷಿ ಸಂಕುಲ ಉಳಿಸಬಹುದು ಜೊತೆಗೆ ಬೇಸಿಗೆಯಲ್ಲಿ ನೀರಿನ ಅಭಾವ ಹೆಚ್ಚಾಗಿರುತ್ತದೆ ಪ್ರತಿಯೊಬ್ಬರೂ ನೀರಿನ ಸಂರಕ್ಷಣೆ ಮಾಡಬೇಕು. ಪ್ರಾಣಿ ಪಕ್ಷಗಳಿಗೆ ನೀರಿಡಿ ನಾವು ಕೂಡಾ ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಬೇಕು ಮತ್ತು ವಿವಿಧ ಕೆಲಸಗಳಲ್ಲಿನೀರನ್ನು ಮಿತವಾಗಿ ಬಳಕೆ ಮಾಡಿ ನೀರಿನ ನೀರಿನ ಸಂರಕ್ಷಣೆಗೆ ಮುಂದಾಗಬೇಕು ಎಂದು ವನಸಿರಿ ಅಮರೇಗೌಡ ಮಲ್ಲಾಪುರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸಂಧರ್ಭದಲ್ಲಿ ಮುಖ್ಯ ಗುರುಗಳು ಶಾಂತರಾಜ NR, ನಾಗರಾಜ ಬೊಮ್ಮನಾಳ,ಮುದುಕಪ್ಪ ಹೊಸಳ್ಳಿ ಕ್ಯಾಂಪ್, ಶಿಕ್ಷಕಿ ಕುಮಾರಿ ಪದ್ಮಾವತಿ, ಶಿಕ್ಷಕಿ ಶ್ರೀಮತಿ ಅನುಸೂಯ ಮಸ್ಕಿ, ಅತಿಥಿ ಶಿಕ್ಷಕ ಲಿಂಗಣ್ಣ, ಅಂಗನವಾಡಿ ರಾಜೇಶ್ವರಿ, ಸುನೀತಾ, ಅಡುಗೆ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ