ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಕ, ನಿರೂಪಕ ಸಂಪನ್ಮೂಲ ವ್ಯಕ್ತಿ ಎಸ್. ರಾಮಪ್ಪ ರವರಿಗೆ ಪುನೀತ್ ರಾಜಕುಮಾರ್ ಸ್ಪೂರ್ತಿ ಪ್ರಶಸ್ತಿ

ಬಳ್ಳಾರಿ / ಕಂಪ್ಲಿ : ಧಾರವಾಡದ ರಂಗಾಯಣ ಸುವರ್ಣ ಸಮುಚ್ಚಯ ಭವನದಲ್ಲಿ ಧಾರವಾಡದ ಕರ್ನಾಟಕ ಸೋಶಿಯಲ್ ಕ್ಲಬ್ ಮತ್ತು ಹುಬ್ಬಳ್ಳಿಯ ವಿಶ್ವಾಸ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ 51 ಜನ್ಮದಿನದ ನಿಮಿತ್ತ ಅಪ್ಪು ಉತ್ಸವ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಗೌರವ ಶಿಕ್ಷಕ ನಿರೂಪಕ ಸಂಪನ್ಮೂಲ ವ್ಯಕ್ತಿ ಎಸ್ ರಾಮಪ್ಪ ಅವರ ಶಿಕ್ಷಣ ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವೆಗಾಗಿ ಪುನೀತ್ ರಾಜಕುಮಾರ್ ಸ್ಪೂರ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಂತರ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಸೇವಾ ಕ್ಷೇತ್ರದಲ್ಲಿ ಇನ್ನಷ್ಟು ತೊಡಗಿಸಿಕೊಳ್ಳಲು ಸ್ಪೂರ್ತಿ ಹಾಗೂ ಪುನೀತ್ ಅವರ ಹೆಸರಿನಲ್ಲಿ ಪ್ರಶಸ್ತಿ ದೊರೆತಿರುವುದು ಸಂತಸದ ವಿಚಾರ ಎಂದರು
ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಸರ್ವಧರ್ಮ ಸಮಾಜ ಸೇವಕ ರಮೇಶ್ ಮಹದೇವಪ್ಪ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಜಿಲ್ಲಾ ಘಟಕದ ಮಹಿಳಾ ಗೌರವ ಅಧ್ಯಕ್ಷ ವೀಣಾ ಹೊಸಮನಿ, ಸಾಹಿತಿ ಶಿಕ್ಷಕ ಪಂಡಿತ್ ಅವಜಿ, ವಿಶ್ವಾಸ್ ಫೌಂಡೇಶನ್ ಮಂಜುಳಾ ಬೆಣ್ಣೆ, ಕರ್ನಾಟಕ ಸೋಶಿಯಲ್ ಕ್ಲಬ್‌ ನ ಚಂದ್ರಶೇಖರ್ ಮಾಡಲಗೇರಿ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ