ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯಶಸ್ವಿನಿ ನೊಂದಣಿ ಮಾಡಿಸುವುದು ಸೇವಾ ಕಾರ್ಯವೆಂದು ಭಾವಿಸಿ – ಹರೀಶ್ ಕುಮಾರ್

ತುಮಕೂರು/ ತಿಪಟೂರು – ತಾಲೂಕಿನ ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಸೌಹಾರ್ದ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯಶಸ್ವಿನಿ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಿಪಟೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಹರೀಶ್ ಕುಮಾರ್ ರವರು ರೈತರು, ಬಡವರು ಹಾಗೂ ಮಧ್ಯಮ ವರ್ಗದ ಸದಸ್ಯರನ್ನು ಯಶಸ್ವಿನಿ ವಿಮಾ ಯೋಜನೆಯಲ್ಲಿ ನೊಂದಣಿ ಮಾಡಿಸುವುದು ಸಮಾಜ ಸೇವಾ ಕಾರ್ಯವೆಂದು ಭಾವಿಸಬೇಕು. ಯಶಸ್ವಿನಿ ವಿಮೆಯು ಖಾಸಗಿ ವಿಮಾ ಕಂಪನಿಗಳಂತೆ ಆದಾಯ ಉದ್ದೇಶಕ್ಕಾಗಿ ನಡೆಸುತ್ತಿರುವ ವಿಮಾ ಯೋಜನೆ ಅಲ್ಲ. ಇದರಲ್ಲಿ ಒಬ್ಬ ಸದಸ್ಯರಿಗೆ ಕೇವಲ ಒಂದು ನೂರು ರೂ. ಗಳಂತೆ ಶುಲ್ಕ ವಿಧಿಸಲಾಗುವುದು. ಹಾಗೂ ಪ್ರತಿ ಸದಸ್ಯರಿಗೆ 5 ಲಕ್ಷ ರೂಗಳವರೆಗೆ ಶಸ್ತ್ರಚಿಕಿತ್ಸಾ ವೆಚ್ಚವನ್ನು ಭರಿಸಲಾಗುವುದು ಹಾಗೂ ಖಾಸಗಿ ವಿಮಾ ಕಂಪನಿಗಳಂತೆ ಯಾವುದೇ ನಿಬಂಧನೆಗಳಿರುವುದಿಲ್ಲ. ಆದ್ದರಿಂದ ನಿಮ್ಮ ಸಹಕಾರ ಸಂಘಗಳ ಪ್ರತಿ ಸದಸ್ಯರ ಕುಟುಂಬವನ್ನು ಯಶಸ್ವಿನಿ ವಿಮಾ ಯೋಜನೆ ಅಡಿ ನೊಂದಾಯಿಸಿ ಅವರುಗಳಿಗೆ ಕಷ್ಟಕಾಲದಲ್ಲಿ ನೆರವಾಗುವಂತಹ ಕಾರ್ಯದಲ್ಲಿ ತಾವು ಪಾಲ್ಗೊಳ್ಳಬೇಕೆಂದು ಸೂಚಿಸಿದರು.
ಸಭೆಯಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ನಿರೀಕ್ಷಕರಾದ ರಂಗನಾಥ್ ತುಮಕೂರು ಹಾಲು ಒಕ್ಕೂಟದ ತಿಪಟೂರು ಉಪ ಶಾಖೆಯ ಮೇಲ್ವಿಚಾರಕರಾದ ದಿವಾಕರ್ ಶಶಿಕಲಾ ಶ್ರೀ ಲಕ್ಷ್ಮಿ ಸೇರಿದಂತೆ ಇತರರು ಹಾಜರಿದ್ದರು.

ವರದಿ: ಮನು ಸಿಡ್ಲೆಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ