ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಭಿನಂದನಾ ಸಮಾರಂಭ

ಬೆಳಗಾವಿ/ ನೇಸರಗಿ- ರಾಜ್ಯ ಮಟ್ಟದ ರಾಣಿ ಅಬ್ಬಕ್ಕದೇವಿ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಶ್ರೀಮತಿ ಅನುಸೂಯಾ ಶಂಕರೆಪ್ಪ ಮದನಭಾವಿ ಇವರಿಗೆ ಅಭಿನಂದನಾ ಸಮಾರಂಭ ದಿ. ೨೮ ರಂದು ಮಧ್ಯಾಹ್ನ ೪ ಘಂಟೆಗೆ ಸಮೀಪದ ಮೇಕಲಮರಡಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ನಡೆಯಲಿದೆ‌.
ಸಾನಿಧ್ಯವನ್ನು ಮಲ್ಲಾಪೂರ ಗಾಳೇಶ್ವರ ಮಠದ ಚಿದಾನಂದ ಸ್ವಾಮೀಜಿ ವಹಿಸುವರು. ಮಾಜಿ ಜಿ.ಪಂ. ಸದಸ್ಯ ನಿಂಗಪ್ಪ ಅರಕೇರಿ ಉದ್ಘಾಟಿಸುವರು. ಎಸ್ ಡಿ ಎಂ ಸಿ ಅಧ್ಯಕ್ಷ ಅಜೀತ ತುಬಾಕದ ಅಧ್ಯಕ್ಷತೆ ವಹಿಸುವರು. ಬಿಇಓ ಎ.ಎನ್.ಪ್ಯಾಟಿ, ಪ್ರಗತಿಪರ ರೈತ ಗೌಡಪ್ಪ ಯರಡಾಲ ಜ್ಯೋತಿ ಪ್ರಜ್ವಲನಗೊಳಿಸುವರು. ಮುಖ್ಯ ಅತಿಥಿಗಳಾಗಿ ಮುಖ್ಯೋಪಾಧ್ಯಾಯ ಅರ್ಜುನ ಕಡೆಟ್ಟಿ, ಶಿಕ್ಷಕ ಸಾಹಿತಿ ವಾಯ್.ಬಿ.ಕಡಕೋಳ, ಸಿಪಿಐ ಗಜಾನನ ನಾಯ್, ಪಿಎಸ್ ಐ ಐ.ಎಚ್.ರಿಚಿ, ಮುಖ್ಯೋಪಾಧ್ಯಾಯ ಎಸ್.ಎಸ್.ಗಾಣಗಿ, ಶಿಕ್ಷಕ ಜಿ.ಜಿ.ಅಂಗಡಿ, ನಿವೃತ್ತ ಶಿಕ್ಷಕ ಸಿ.ಬಿ.ಶೀಗಿಹಳ್ಳಿ, ದೈಹಿಕ ಶಿಕ್ಷಕ ಎ.ಆರ್.ಸುಂಕದ, ಗ್ರಾ.ಪಂ‌. ಅಧ್ಯಕ್ಷೆ ಭಾರತಿ ತಿಗಡಿ, ಗ್ರಾ.ಪಂ ಉಪಾಧ್ಯಕ್ಷ ಕಾಶೀಮ ಜಮಾದಾರ, ಪಿಕೆಪಿಎಸ್ ಅಧ್ಯಕ್ಷ ಬಾಹುಬಲಿ ಟಗರಿ, ಪಿಕೆಪಿಎಸ್ ಉಪಾದ್ಯಕ್ಷ ನಿಂಗಪ್ಪ ಬುದನೂರ, ಗ್ರಾಮ ಲೆಕ್ಕಾಧಿಕಾರಿ ಈರಣ್ಣ ಕೇಂದ್ರಿ, ಹಿರಿಯ ಪತ್ರಕರ್ತ ಸಿ.ವಾಯ್.ಮೆಣಸಿನಕಾಯಿ, ಸ್ಪೂರ್ತಿ ಹರ್ಬಲ್ ಎಂ.ಡಿ ಸಿದ್ಧಾರ್ಥ ಮರೇದ, ಸಾಮಾಜಿಕ ಕಾರ್ಯಕರ್ತ ಸೋಮಲಿಂಗ ಮದನಭಾವಿ ಗ್ರಾಮ ಪಂಚಾಯತಿ ಸದಸ್ಯರು, ಶಿಕ್ಷಕರು, ಎಸ್ ಡಿ ಎಂ ಸಿ ಪದಾಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಳ್ಳುವರು.
ಇದೇ ಸಂದರ್ಭದಲ್ಲಿ ಗುರುವಂದನೆ ಕಾರ್ಯಕ್ರಮ ನಡೆಯಲಿದೆ.

ವರದಿ : ಭೀಮಸೇನ ಕಮ್ಮಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ