ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾಜಿ ಸಚಿವ ದಿ.ರಾಜುಗೌಡರ 21ನೇ ಪುಣ್ಯ ಸ್ಮರಣೆ ಪ್ರಯುಕ್ತ ಬೃಹತ್ ಆರೋಗ್ಯ ಶಿಬಿರ.

ಚಾಮರಾಜನಗರ/ ಹನೂರು: ಪ್ರಜಾಪ್ರಭುತ್ವದ ಆಶಯದಂತೆ ಜನರಿಂದ ಜನರಿಗೋಸ್ಕರ ಎಂದು ತಮ್ಮ ಜೀವನವನ್ನೇ ಕ್ಷೇತ್ರದ ಜನರಿಗಾಗಿ ಮುಡಿಪಾಗಿಟ್ಟವರು ಮಾಜಿ ಸಚಿವ ದಿ.ರಾಜೂಗೌಡರವರು. ಅವರ ರಾಜಕೀಯ ಹಾದಿಯಲ್ಲಿ ಮಾಜಿ ಶಾಸಕ ಆರ್. ನರೇಂದ್ರ ಅವರು ಮುನ್ನಡೆಯುತ್ತಿದ್ದಾರೆ ಎಂದು ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.
ತಾಲೂಕಿನ ದೊಡ್ಡಿಂದುವಾಡಿಯಲ್ಲಿ ಮಾಜಿ ಸಚಿವ ದಿ.ಜಿ. ರಾಜೂಗೌಡರವರ 21ನೇ ಪುಣ್ಯಸ್ಮರಣೆ ಅಂಗವಾಗಿ ನಡೆದ ಆರೋಗ್ಯ ಶಿಬಿರದಲ್ಲಿ ಮಾತನಾಡಿದರು.
ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಶಿಕ್ಷಣ ಕ್ರಾಂತಿ ಮಾಡಿದ್ದಾರೆ. ತಮ್ಮ ಸ್ವಗ್ರಾಮದಲ್ಲಿ 3 ಎಕರೆ ಜಮೀನು ನೀಡುವುದರ ಮೂಲಕ ಪ್ರೌಢಶಾಲೆ ತೆರೆದು ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದರು.
ನಂತರ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ರಾಜೂಗೌಡರ ಶಿಷ್ಯರಲ್ಲಿ ನಾನು ಕೂಡ ಒಬ್ಬನಾಗಿದ್ದೇನೆ.
ಅವರದು ನೇರ ನುಡಿ, ನಿಷ್ಟುರವಾದಿಯಾಗಿದ್ದರು, ಸೇವಾ ಮನೋಭಾವ ಹೊಂದಿದವರಾಗಿದ್ದರು. ಕ್ಷೇತ್ರದ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ, ಜಿಲ್ಲಾ ಕ್ರೀಡಾಂಗಣ ಹಾಗೂ ಜಿಲ್ಲಾಡಳಿತ ಭವನ ನಿರ್ಮಾಣದಲ್ಲಿ ಅವರ ಪರಿಶ್ರಮವಿದೆ ಎಂದು ತಿಳಿಸಿದರು.
ಬಳಿಕ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ಆರೋಗ್ಯವೇ ಭಾಗ್ಯ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸದೃಢ ದೇಹ ಮತ್ತು ಸದೃಢ ದೇಶ ನಿರ್ಮಾಣಕ್ಕಾಗಿ ಆರೋಗ್ಯ ಬಹಳ ಮುಖ್ಯವಾಗಿದೆ. ಇಂತಹ ಮಹಾನ್ ಕಾರ್ಯಕ್ಕೆ ರಾಜೂಗೌಡರ ಸ್ಮರಣೆ ಸಾಕ್ಷಿಯಾಗಿರುವುದು ಸಂತಸದ ವಿಚಾರವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗೋಪಾಲ್ ಗೌಡ ಆಸ್ಪತ್ರೆಯ ನರರೋಗ ತಜ್ಞ ಡಾ. ಪುಶ್ರುತ್, ಮಾಜಿ ಶಾಸಕರಾದ ಆರ್. ನರೇಂದ್ರ, ಆಶಾ ನರೇಂದ್ರ, ನವನೀತ್ ಗೌಡ, ನಿಖಿತಾಗೌಡ, ಎಂಸಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್‌ ಕುಮಾ‌ರ್, ಹೊನ್ನೇಗೌಡ ನಾಗರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ