ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನರಾಂ ರವರ 118ನೇ ಜಯಂತಿ ಹಾಗೂ ಸಂವಿಧಾನ ಶಿಲ್ಪಿ ಡಾ|| ಬಿ ಆರ್ ಅಂಬೇಡ್ಕರ್ ರವರ 134ನೇ ಜಯಂತಿ ಕಾರ್ಯಕ್ರಮದ ಪೂರ್ವಸಿದ್ದತಾ ಸಭೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯ ಮಹಾತ್ಮಾ ಗಾಂಧೀಜಿ ಸಭಾಂಗಣದಲ್ಲಿ ಅಮರೇಶ್ ಜಿ ಕೆ ತಹಶೀಲ್ದಾರರು ಹಾಗೂ ಅಧ್ಯಕ್ಷರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇವರ ಅಧ್ಯಕ್ಷತೆಯಲ್ಲಿ ದಿ. 05.04.2025 ರಂದು ಆಚರಿಸುವ ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನರಾಂ ರವರ 118ನೇ ಜಯಂತಿ ಹಾಗೂ ದಿ. 14.04.2025 ರಂದು ಆಚರಿಸುವ ಸಂವಿಧಾನ ಶಿಲ್ಪಿ ಡಾ|| ಬಿ ಆರ್ ಅಂಬೇಡ್ಕರ್ ರವರ 134ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸುವ ಬಗ್ಗೆ ಪೂರ್ವಸಿದ್ದತಾ ಸಭೆಯನ್ನು ನಡೆಸಲಾಯಿತು.

ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನರಾಂ ರವರ ಜಯಂತಿಯನ್ನು ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ 05.04.2025 ರಂದು ಸರಳವಾಗಿ ಆಚರಿಸಲು ಹಾಗೂ 14.04.2025 ರಂದು ಡಾ|| ಬಿ ಆರ್ ಅಂಬೇಡ್ಕರ್ ರವರ ಜಯಂತಿ ಕಾರ್ಯಕ್ರಮದಲ್ಲಿ ಇಬ್ಬರೂ ಮಹನೀಯರ ಜಯಂತಿ ಕಾರ್ಯಕ್ರಮವನ್ನು ಎ.ಪಿ.ಎಂ.ಸಿ ಆವರಣದಲ್ಲಿ ವೇದಿಕೆ ನಿರ್ಮಾಣ ಮಾಡಿ ಅದ್ದೂರಿಯಾಗಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ|| ಬಿ ಆನಂದ್ ಕುಮಾರ್ ಕಾರ್ಯನಿರ್ವಾಹಕ ಅಧಿಕಾರಿಗಳು, ಶ್ರೀಮತಿ ಶಾಹಿಕಾ ಅಹ್ಮದ್ ಸಹಾಯಕ ನಿರ್ದೇಶಕರು ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ ಕೊಟ್ಟೂರು, ನಸರುಲ್ಲಾ ಮುಖ್ಯಾಧಿಕಾರಿಗಳು ಪಟ್ಟಣ ಪಂಚಾಯಿತಿ, ಪದ್ಮನಾಭ ಕರಣಂ ಕ್ಷೇತ್ರ ಶಿಕ್ಷಣಾಧಿಕಾರಿ, ಬಿ ದುರುಗಪ್ಪ ಅಧ್ಯಕ್ಷರು ತಾಲೂಕು ಡಾ ಬಿ ಆರ್ ಅಂಬೇಡ್ಕರ್ ಸಂಘ, ಟಿ ಹನುಮಂತಪ್ಪ ಅಧ್ಯಕ್ಷರು ತಾಲೂಕು ಡಾ|| ಬಾಬು ಜಗಜೀವನರಾಂ ಸಂಘ, ಜಿಲ್ಲಾ ಡಿಎಸ್ಎಸ್ ಮುಖಂಡರಾದ ತೆಗ್ಗಿನಕೇರಿ ಕೊಟ್ರೇಶ್, ಬದ್ದಿ ಮರಿಸ್ವಾಮಿ, ಎಂ ಸಿ ಕೆಂಗರಾಜ ಜಿಲ್ಲಾ ಉಪಾಧ್ಯಕ್ಷರು ಚಲವಾದಿ ಮಹಾಸಭಾ ಹಾಗೂ ಪಪಂ ಸದಸ್ಯರು, ಶಿವಣ್ಣ ಎಪಿಎಂಸಿ ಉಪಾಧ್ಯಕ್ಷರು, ಜಿಲ್ಲಾ ಡಿಎಸ್ಎಸ್ ಸಂಘಟನಾ ಸಂಚಾಲಕರಾದ ಕಂದಗಲ್ ಪರಶುರಾಮ ಎನ್.ಎಫ್.ಐ.ಡಬ್ಲು.ಎಫ್ ರಾಜ್ಯ ಕಾರ್ಯದರ್ಶಿ ರೇಣುಕಮ್ಮ , ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಎನ್ ಭರಮಣ್ಣ, ವಿವಿಧ ಇಲಾಖೆಯ ಅಧಿಕಾರಿ/ಸಿಬ್ಬಂದಿ, ವಿವಿಧ ಸಂಘಟನೆಯ ಮುಖಂಡರು ಹಾಜರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ