ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಏಪ್ರಿಲ್. 15 ರವರೆಗೆ ನೀರು ಹರಿಸದಿದ್ದಲ್ಲಿ 60 ಸಾವಿರ ಹೆಕ್ಟ‌ರ್ ಬೆಳೆ ನಷ್ಟ , ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸತ್ಯಾಗ್ರಹ :ದೇವಿಂದ್ರಪ್ಪ ಕೋಲ್ಕರ್

ಯಾದಗಿರಿ/ಶಹಾಪುರ : ಏಪ್ರಿಲ್. 15 ರವರೆಗೆ ನೀರು ಹರಿಸದಿದ್ದಲ್ಲಿ ರೈತರು 60 ಸಾವಿರ ಹೆಕ್ಟೇರ್ ಬೆಳೆ ನಷ್ಟ ಅನುಭವಿಸಬೇಕಾಗುತ್ತದೆ ಒಂದು ವೇಳೆ ನೀರು ಕೊಡದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸತ್ಯಾಗ್ರಹ ಕೂಡಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ವಾಸುದೇವ ಮೇಟಿ ಬಣದ ಶಹಾಪುರ ತಾಲೂಕು ಅಧ್ಯಕ್ಷರಾದ ದೇವಿಂದ್ರಪ್ಪ ಕೋಲ್ಕರ್ ಇವರು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.
ಹಿಂಗಾರು ಬಿತ್ತನೆ ಮಾಡಿಕೊಂಡ ರೈತರು ಶೇಂಗಾ, ಭತ್ತ, ಸಜ್ಜೆ, ಮೆಣಸಿಕಾಯಿ ಸೇರಿದಂತೆ ಇತರೆ ವಾಣಿಜ್ಯ ಬೆಳೆಗಳನ್ನು ಬಿತ್ತನೆ ಮಾಡಿದ್ದು, ಏ.10 ರವರೆಗೆ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗೆ ನೀರು ಹರಿಸದಿದ್ದಲ್ಲಿ ಜಿಲ್ಲೆಯಲ್ಲಿ ಒಟ್ಟು 60 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಉಂಟಾಗಿ, ಲಕ್ಷಾಂತರ ರೂ. ಗಳನ್ನು ಸಾಲ ಮಾಡಿಕೊಂಡ ರೈತರ ಸರಣಿ ಆತ್ಮಹತ್ಯೆಗಳ ಸರಮಾಲೆ ನಡೆದೀತು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಶಹಾಪುರ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರು ಬಿತ್ತನೆ ಮಾಡಿದ ಪ್ರತಿ ಬೆಳೆ ಪೈರು ಅವಧಿ ಮೂರೂವರೆ ತಿಂಗಳಿದ್ದು, ನೀರನ್ನೇ ನಂಬಿಕೊಂಡು ತಮ್ಮ ಹೊಲಗದ್ದೆಗಳಲ್ಲಿ ಬಿತ್ತನೆ ಮಾಡಿದ್ದಾರೆ. ಸರ್ಕಾರ ನೀರು ಬಿಡಲು ನಿರಾಕರಿಸಿದಲ್ಲಿ ರೈತರಿಗೆ ಒಟ್ಟು 10 ಸಾವಿರ ಕೋಟಿ ಮೌಲ್ಯದ ಬೆಳೆ ನಷ್ಟವಾಗಿ ಆತಂಕದಲ್ಲಿ ಕಾಲ ಕಳೆಯಬೇಕಾಗುತ್ತದೆ ಎಂದರು.
ಜಲಾಶಯ ಭರ್ತಿ ಎಂದು ಹೇಳಿಕೆ ನೀಡಿದ್ದ ಅಧಿಕಾರಿಗಳು ಇಂದು ನೆರೆಯ ತೆಲಂಗಾಣಕ್ಕೆ 2 ಟಿಎಮ್‌ಸಿ ಎಂದು ನಾಲ್ಕಾರು ದಿನಗಳ ಕಾಲ ಅಂದಾಜು 10 ಟಿ,ಎಮ್,ಸಿ, ನೀರು ಬಿಟ್ಟಿರುವುದೇ ನಮ್ಮ ಬೆಳೆಗಳಿಗೆ ನೀರಿನ ಕೊರತೆಗೆ ಕಾರಣವಾಗಿದೆ,
ನಿಷೇಧಿತವಾಗಿದ್ದರೂ ಭತ್ತ ಬೆಳೆದು ರೈತರು ಆತಂಕದಲ್ಲಿದ್ದಾರೆ. ಬೆಳೆ ಪರಿಹಾರ ಸೂಕ್ತವಾಗಿ ಹಂಚಿಕೆಯಾಗಬೇಕು ಎಂದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ