ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಲ್ಲೂಕು ಕಛೇರಿಯಲ್ಲಿ ಶ್ರೀ ಅಗ್ನಿ ಬನ್ನಿರಾಯ ಜಯಂತಿ ಆಚರಣೆ

ಬಳ್ಳಾರಿ / ಕಂಪ್ಲಿ : ನಾಡಹಬ್ಬಗಳ ಆಚರಣಾ ಸಮಿತಿ ತಾಲೂಕು ಆಡಳಿತದ ವತಿಯಿಂದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಶ್ರೀ ಅಗ್ನಿ ಬನ್ನಿರಾಯ ಜಯಂತಿಯನ್ನು ಆಚರಿಸಲಾಯಿತು.

ಶ್ರೀ ಅಗ್ನಿ ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು. ಗಣ್ಯರು ಅಗ್ನಿವಂಶ, ಕ್ಷತ್ರಿಯ ತಿಗಳ ಗೌಡ ಸಮುದಾಯದ ಮೂಲಪುರುಷ ಅಗ್ನಿ ಬನ್ನಿರಾಯ ಸ್ವಾಮಿ ಬಗ್ಗೆ ಮಾಹಿತಿ ನೀಡಿದರು. ಹಿಂದೂ ಧರ್ಮದ 18 ಪುರಾಣಗಳ ಪೈಕಿ 9 ಪುರಾಣಗಳಲ್ಲಿ ಅಗ್ನಿಬನ್ನಿರಾಯರ ಮಹಿಮೆಯನ್ನು ವರ್ಣಿಸಲಾಗಿದೆ. ತಿಗಳ ಗೌಡ ಸಮುದಾಯದವರು ಶ್ರಮ ಜೀವನಕ್ಕೆ ಹೆಸರುವಾಸಿಯಾಗಿದ್ದು, ಕೃಷಿ ಮಾಡುವ ಮೂಲಕ ಹೂವು–ಹಣ್ಣು, ತರಕಾರಿ ಬೆಳೆದು ಮಾರಾಟ ಮಾಡಿ ಬದುಕು ಕಟ್ಟಿಕೊಂಡಿದ್ದಾರೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕು’ ಎಂದರು. ಅವರ ತತ್ವ, ಆದರ್ಶ ಮತ್ತು ಸಮಾಜದಲ್ಲಿ ಅವರ ಕೊಡುಗೆ ಬಗ್ಗೆ ಮಾತನಾಡಿದರು. ಸಮಾಜದ ಏಳಿಗೆಗೆ ಬನ್ನಿರಾಯ ಅವರ ತತ್ವಗಳನ್ನು ಅನುಸರಿಸುವ ಪ್ರತಿಜ್ಞೆ ತೆಗೆದುಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಭಾಗಿಯಾದವರು ಶ್ರೀ ಅಗ್ನಿ ಬನ್ನಿರಾಯರ ತತ್ವಗಳನ್ನು ಪಾಲಿಸಬೇಕು ಎಂಬ ಮನೋಭಾವವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಆಡಳಿತ, ಜನಪ್ರತಿನಿಧಿಗಳು, ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ