ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಅನನ್ಯತೆಯನ್ನು ಬಲಪಡಿಸಲು ಸರ್ವರೂ ಸಂಘಟಿತರಾಗಬೇಕು

ಬಳ್ಳಾರಿ / ಕಂಪ್ಲಿ : ದೇಶಾದ್ಯಂತ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಕಳೆದ ಒಂದು ತಿಂಗಳ ಉಪವಾಸ ಅಂತ್ಯಗೊಂಡಿದ್ದು, ಇಂದು ಪವಿತ್ರ ರಂಜಾನ್‌ ಹಬ್ಬ ಆಚರಿಸುತ್ತಿದ್ದಾರೆ. ಈ ಸಾಮೂಹಿಕ ಪ್ರಾರ್ಥನಾ ಸಮಯದಲ್ಲಿ ಪ್ಯಾಲೆಸ್ತೀನ್ ಯನ್ನರ ಮೇಲಿನ ಇಸ್ರೇಲ್ ದಾಳಿ ನಿಲ್ಲುವಂತೆ ಸಾಮೂಹಿಕವಾಗಿ ಪ್ರಾರ್ಥಿಸಿದರು. ಹಾಗೂ ವಕ್ಫ್ ತಿದ್ದುಪಡಿ ಮಸೂದೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು, ಇಲ್ಲಿನ ಎಸ್‌.ಡಿ.ಪಿ.ಐ ಪದಾಧಿಕಾರಿಗಳು ಸೋಮವಾರ ಪಟ್ಟಣದ ಖದೀಮ್ ಈದ್ಗಾ ಮೈದಾನ, ಖದೀಮ್ ಸುನ್ನಿ ಈದ್ಗಾ ಮೈದಾನ, ಅಲಿ ಪಬ್ಲಿಕ್ ಶಾಲೆಯ ಹತ್ತಿರ ಇರುವ ಬೆಳಗೋಡು ರಸ್ತೆಯ ಬಳಿಯಲ್ಲಿ ಕರಪತ್ರ ವಿತರಿಸಿ, ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.
ಎಸ್‌ಡಿಪಿಐ ಅಧ್ಯಕ್ಷ ಮಹಮ್ಮದ್ ರಫಿಕ್ ಮಾತನಾಡಿ, ಇಸ್ರೇಲ್ ಯುದ್ಧ ನಿಲ್ಲಬೇಕು. ಎಲ್ಲೆಡೆ ಶಾಂತಿ ನೆಲಸಬೇಕು. ಇದಕ್ಕಾಗಿ ವಿಶ್ವಸಂಸ್ಥೆ ತಕ್ಕ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ವಿರೋಧಿ ಹೋರಾಟಗಾರರ ಮೇಲೆ, ಎಸ್‌ಡಿಪಿಐ ನಾಯಕರು, ಕಾರ್ಯಕರ್ತರ ವಿರುದ್ಧ ಇಡಿ ದಾಳಿ ನಡೆಯುತ್ತಿರುವುದು ಸರಿಯಲ್ಲ. ತನಿಖಾ ಏಜೆನ್ಸಿಗಳ ಹಾಗೂ ಕರಾಳ ಕಾನೂನು ದುರುಪಯೋಗವನ್ನು ಒಗ್ಗಟ್ಟಿನಿಂದ ವಿರೋಧಿಸಬೇಕು. ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಅನನ್ಯತೆಯನ್ನು ಬಲಪಡಿಸಲು ಸರ್ವರೂ ಸಂಘಟಿತರಾಗಬೇಕು ಎಂದು ಹೇಳಿದರು.
ಎಸ್‌ಡಿಪಿಐ ಪದಾಧಿಕಾರಿಗಳಾದ ಯು. ಜಿಲಾನ್ ಸಾಬ್, ಇಮ್ರಾನ್‌ಖಾನ್, ಇರ್ಷಾದ್, ದೌಲಖಾನ್, ಅಲ್ತಾಫ್, ಯಾಸೀನ್, ಹೊನ್ನೂರ್‌ವಲಿ ಇತರರಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ