ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಲೂಕಿನೆಲ್ಲೆಡೆ ಸಂಭ್ರಮದ ಶ್ರೀ ರಾಮನವಮಿ ಆಚರಣೆ

ಬಳ್ಳಾರಿ / ಕಂಪ್ಲಿ : ತಾಲೂಕಿನೆಲ್ಲೆಡೆ ಶ್ರೀ ರಾಮ ನವಮಿಯನ್ನು ಭಾನುವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ರಾಮ ಮಂದಿರಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ಬೆಳಗ್ಗೆಯಿಂದಲೇ ಸಂಭ್ರಮೋತ್ಸಾಹದಿಂದ ಜರುಗಿದವು. ರಾಮ, ಸೀತಾ ಮತ್ತು ಲಕ್ಷ್ಮಣರ ಮೂರ್ತಿಗಳಿಗೆ ಪುಷ್ಪಾಲಂಕಾರ ಮಾಡಲಾಗಿತ್ತು.
ತಾಲೂಕಿನ ಸಣಾಪುರ ಗ್ರಾಮ ಬಳಿಯ ನಾರಾಯಣಸ್ವಾಮಿ ಕ್ಯಾಂಪಿನಲ್ಲಿರುವ ಶ್ರೀ ಸೀತಾ ಸಮೇತ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ರಾಮ ನವಮಿ ಅಂಗವಾಗಿ ಶಿಲ್ಪ ಸತ್ಯಸಾಯಿ ಮತ್ತು ತುಳಸಿ ಶಿವ ದಂಪತಿಗಳ ನೇತೃತ್ವದಲ್ಲಿ ಸೀತಾರಾಮರ ಕಲ್ಯಾಣ ಮಹೋತ್ಸವ ಸಂಭ್ರಮದಿಂದ ಜರುಗಿತು. ಇಲ್ಲಿನ ದೇವಸ್ಥಾನದಲ್ಲಿ ಸೀತಾ, ರಾಮ, ಲಕ್ಷ್ಮಣ ಇವರಿಗೆ ಪುರೋಹಿತರಾದ ಕಿರಣ್ ಕುಮಾರಸ್ವಾಮಿ, ಗಿರೀಶಸ್ವಾಮಿ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿದ್ದು, ಮತ್ತು ಪುಷ್ಪಾಲಂಕಾರದಿಂದ ಶೃಂಗರಿಸಲಾಗಿತ್ತು. ನಂತರ ಅನ್ನ ಸಂತರ್ಪಣೆ ಜರುಗಿತು. ಈ ವೇಳೆ ಗ್ರಾ.ಪಂ ಅಧ್ಯಕ್ಷ ರಮಣಯ್ಯ ಹಾಗೂ ಮುಖಂಡ ಎಂ.ಅಚ್ಚುತ್ತರಾಯ ವರ್ಮ, ಚೊಕ್ಕರಾವ್, ವೆಂಕಟೇಶಲು, ನರಸಿಂಹಲು ಸೇರಿದಂತೆ ಭಕ್ತರು ಭಾಗವಹಿಸಿದ್ದರು.

ಬಸವೇಶ್ವರಕ್ಯಾಂಪ್ :

ಇಲ್ಲಿನ ಬಸವೇಶ್ವರ ಕ್ಯಾಂಪಿನ ಕೋದಂಡರಾಮ ದೇವಸ್ಥಾನದಲ್ಲಿ ಶ್ರೀರಾಮ ನವಮಿ ಸಂಭ್ರಮದಿಂದ ಆಚರಿಸಿದರು. ಶಿವಾಜಿ ಪುರೋಹಿತ್ಯದಲ್ಲಿ ಕಲ್ಯಾಣ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಸಂದರ್ಭದಲ್ಲಿ ಮುಖಂಡ ವೆಂಕಟರಾಮರಾಜು ಸೇರಿದಂತೆ ಕ್ಯಾಂಪಿನ ಜನರು ಪಾಲ್ಗೊಂಡಿದ್ದರು.

ವರದಿ : ಜಿಲಾಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ