ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ಏಪ್ರಿಲ್ 8 ರಿಂದ ಏಪ್ರಿಲ್ 13 ವರೆಗೆ ಶಿವಶರಣೆ ಅಕ್ಕಮಹಾದೇವಿ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಅಕ್ಕಮಹಾದೇವಿ ಮಹಿಳಾ ಮಂಡಳಿಯಿಂದ ಪಟ್ಟಣದ ಸಂಗಾತ್ರಯ ಸಂಸ್ಕೃತ ಪಾಠಶಾಲೆ ಆವರಣದಲ್ಲಿರುವ ಶ್ರೀ ಅಕ್ಕಮಹಾದೇವಿ ದೇವಸ್ಥಾನದಲ್ಲಿ ಅಕ್ಕಮಹಾದೇವಿ ಜಯಂತಿಯ ಅಂಗವಾಗಿ ಏಪ್ರಿಲ್ 8 ರಿಂದ ಏಪ್ರಿಲ್ 13 ವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಹಾಗೂ ಕಳಸಾರೋಹಣ ಮತ್ತು ಪ್ರವಚನ ಕಾರ್ಯಕ್ರಮಗಳು ಹಾಗೂ ಅಕ್ಕಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಗಳು ಜರಗಲಿವೆ ಎಂದು ಅಕ್ಕಮಹಾದೇವಿ ಮಹಿಳಾ ಮಂಡಳಿಯ ಕಾರ್ಯದರ್ಶಿ ಬಿ.ಎಂ. ಪುಷ್ಪ ರುದ್ರಯಸ್ವಾಮಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಅವರು ಪಟ್ಟಣದ ಸಂಗಾತ್ರಯ ಸಂಸ್ಕೃತ ಪಾಠಶಾಲೆ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಏಪ್ರಿಲ್ ಎಂಟರಿಂದ ಏಪ್ರಿಲ್ ೧೧ ರವರೆಗೆ ಪ್ರತಿದಿನ ಸಂಜೆ 6 ಗಂಟೆಯಿಂದ 7:00 ವರೆಗೆ ಉತ್ತರ ಕನ್ನಡ ಜಿಲ್ಲೆ ಅತ್ತಿವೇರಿ ಬಸವ ಧಾಮದ ಪೂಜ್ಯಶ್ರೀ ಬಸವ ಮಾತಾಜಿಯವರಿಂದ ಶರಣರ ಆಚಾರ ವಿಚಾರಗಳು ಕುರಿತು ಪ್ರವಚನ ಕಾರ್ಯಕ್ರಮ ನಡೆಯಲಿದೆ. ಏಪ್ರಿಲ್ 11ರ ಸಂಜೆ 5:30ಕ್ಕೆ ವಚನ ಗಾಯನ ಸ್ಪರ್ಧೆ ನಡೆಯಲಿದ್ದು ಏಪ್ರಿಲ್ 12 ರಂದು ಬೆಳಿಗ್ಗೆ ಸಂಗಾತ್ರಯ ಸಂಸ್ಕೃತ ಪಾಠಶಾಲೆಯ ವಿಶ್ರಾಂತ ಪ್ರಾಚಾರ್ಯರಾದ ಎಂ.ಎಸ್. ಶಶಿಧರ್ ಶಾಸ್ತ್ರಿಗಳ ನೇತೃತ್ವದಲ್ಲಿ ನೂತನ ಕಳಸರೋಣ ನೆರವೇರಲಿದ್ದು, ಬೆಳಗ್ಗೆ 10.30 ಕ್ಕೆ ನೂತನವಾಗಿ ನಿರ್ಮಿಸಲಾದ ಅಕ್ಕಮಹಾದೇವಿಯ ಅನುವಭ ಮಂಟಪದ ಲೋಕಾರ್ಪಣೆ ಜರುಗಲಿದೆ ಸಂಜೆ 4:00ಗೆ ಶ್ರೀ ಅಕ್ಕಮಹಾದೇವಿ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದ್ದು ಸಂಜೆ ಏಳು ಗಂಟೆಗೆ ಮುತ್ತೈದರಿಗೆ ಉಡಿತುಂಬುವ ಕಾರ್ಯಕ್ರಮ ಜರಗಲಿದೆ. ಏಪ್ರಿಲ್ 13 ರಂದು ಸಾಧಕರಿಯರಿಗೆ ಅಕ್ಕಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಸನ್ಮಾನ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮಗಳಲ್ಲಿ ನಾಗಭೂಷಣ ಶಿವಾಚಾರ್ಯರು ಶ್ರೀ ಕರಿಸಿದ್ದೇಶ್ವರ ವಿಶ್ವರಾಧ್ಯ ಶಿವಾಚಾರ್ಯರು ಶ್ರೀ ವಾಮದೇವ ಶಿವಾಚಾರ್ಯ ಶ್ರೀಗಳು ಸೇರಿದಂತೆ ನಾಡಿನ ವಿವಿಧ ಶಿವಾಚಾರ್ಯರು ಹಾಲಿ ಮಾಜಿ ಜನಪ್ರತಿನಿಧಿಗಳು ಅಕ್ಕಮಹಾದೇವಿ ಮಹಿಳಾ ಮಂಡಳಿಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆಂದು ವಿವರಿಸಿದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ