ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೋಡ್ಲಿ ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವವು ಇಂದು ಶ್ರೀ ರಾಮಲಿಂಗಾ ರೆಡ್ಡಿ ದೇಶಮುಖ ಅವರ ಮನೆಯಿಂದ ಪಲ್ಲಕ್ಕಿಯಲ್ಲಿ ಶ್ರೀ ರಾಮಲಿಂಗೇಶ್ವರ ಮೂರ್ತಿಯನ್ನು ಪ್ರತಿಷ್ಠಾಪಿಸಿ, ತನಾರತಿ, ಕಳಸ, ಪುರವಂತರೊಂದಿಗೆ ದಿ. 07-04-2025 ರಂದು ಸೋಮವಾರ ಸಾಯಂಕಾಲ 6.30 ಗಂಟೆಗೆ ಪೂಜ್ಯ ಶ್ರೀ ಷ. ಬ್ರ.ಬಸವಲಿಂಗ ಶಿವಾಚಾರ್ಯರು ಹಿರೇಮಠ ಕೋಡ್ಲಿ ಇವರ ಸನ್ನಿಧಿಯಲ್ಲಿ ಉಚ್ಚಾಯಿ ಮೆರವಣಿಗೆ ಬಾಜಿ,
ಹಲಗೆಯೊಂದಿಗೆ ಶ್ರೀ ರಾಮಲಿಂಗೇಶ್ವರ ಬೆಟ್ಟದ ಮೇಲೆ ರಥೋತ್ಸವು ಜರುಗುವುದು. ದಿ. 07. 04.2025 ರಿಂದ 11. 04.2025 ರ ವರೆಗೆ ಪಲ್ಲಕ್ಕಿ ಮೆರವಣಿಗೆ ಶ್ರೀ ರಾಮಲಿಂಗ ರೆಡ್ಡಿ ದೇಶಮುಖ ಅವರ ಮನೆಯಿಂದ ಪ್ರತಿದಿನ ರಾತ್ರಿ 8:00 ಗಂಟೆಗೆ ಪಲ್ಲಕ್ಕಿ ಮೆರವಣಿಗೆ ಒಂದೊಂದು ಓಣಿಗೆ ಹೋಗುವುದು, ದಿನಾಂಕ 11.04.2025 ರಂದು ಶುಕ್ರವಾರ ರಾತ್ರಿ 10.30 ಗಂಟೆಯಿಂದ ಬೆಳಿಗ್ಗೆ 5:30 ರ ವರೆಗೆ ವಿಶೇಷ ಪಲ್ಲಕ್ಕಿ ಮೆರವಣಿಗೆ ಜರುಗುವುದು. ದಿನಾಂಕ 12- 04 -2025 ರಂದು ಶನಿವಾರ ಸಾಯಂಕಾಲ 6:30 ಗಂಟೆಗೆ ಪೂಜ್ಯ ಶ್ರೀ ಮ. ನಿ. ಪ್ರ. ಚಿಕ್ಕ ಗುರು ನಂಜೇಶ್ವರ ಮಹಾಸ್ವಾಮಿಗಳು ಭರತ ನೂರು ಮತ್ತು ಪೂಜ್ಯ ಶ್ರೀ ಷ. ಬ್ರ. ಬಸವಲಿಂಗ ಶಿವಾಚಾರ್ಯರು ಹಿರೇಮಠ ಕೋಡ್ಲಿ ಇವರುಗಳ ಸನ್ನಿಧಾನದಲ್ಲಿ ವೈಭವದ ರಥೋತ್ಸವ ಜರುಗುವುದು. ದಿ. 13.04.2025 ರಂದು ಸಾಯಂಕಾಲ 4:00ಗೆ ಜಂಗಿ ಪೈಲವಾನರ ಕುಸ್ತಿ ಜರುಗುವುದು. ಕಾರಣ ಸಕಲ ಸದ್ಭಕ್ತರು ಈ ಮೇಲಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀ ರಾಮಲಿಂಗೇಶ್ವರ ದರ್ಶನಾಶೀರ್ವಾದ ಪಡೆದು ಪುನೀತರಾಗಬೇಕೆಂದು ಶ್ರೀ ರಾಮಲಿಂಗಾ ರೆಡ್ಡಿ ದೇಶಮುಖ ಅಧ್ಯಕ್ಷರು ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಸಮಿತಿ ಕೋಡ್ಲಿ ಮತ್ತು ಸಕಲ ಸದ್ಬಕ್ತರು ವಿನಂತಿಸಿಕೊಂಡರು.

ವರದಿ: ಶ್ರೀ ಚಂದ್ರಶೇಖರ್ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ