ಶಿವಮೊಗ್ಗ: ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಇಚ್ಛಾಶಕ್ತಿಗೆ ಜಯ
ಸಿಕ್ಕಂತಾಗಿದೆ ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ.
ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಮೈದಾನ ಶಿವಮೊಗ್ಗ ನಗರದ ನಾಗರೀಕರ ಅತ್ಯಂತ ಹೆಚ್ಚಿನ ವಾಹನ ಚಲನವಲನ ಇರುವ ಸ್ಥಳವಾಗಿದ್ದು, ಕಚೇರಿಗೆ ಬರುತ್ತಿರುವ ಸಾರ್ವಜನಿಕರಿಗೆ ಹಾಗೂ ವಿವಿಧ ಮೂಲಗಳಿಂದ ಕಾರ್ಯಕ್ಕಾಗಿ ಭೇಟಿ ನೀಡುವ ಜನರಿಗೆ ಅನುಕೂಲವಾಗುವ ಸ್ಥಳವಾಗಿದೆ.
ಹಲವು ದಿನಗಳಿಂದ ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದ್ದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದ ಸಂಬಂಧಿತ ವಿವಾದ ಇದೀಗ ಸುಖಾಂತ್ಯ ಕಂಡಿರುವುದು ಅತ್ಯಂತ ಸಂತೋಷದ ಸಂಗತಿ. ಸಂಬಂಧಿತ ಇಲಾಖೆಗಳ ನಡುವಿನ ಸಮಾಲೋಚನೆ ಹಾಗೂ ನಿರ್ಧಾರಗಳ ಬಳಿಕ, ಮೈದಾನವನ್ನು ಸಾರ್ವಜನಿಕ ವಾಹನ ಪಾರ್ಕಿಂಗ್ಗಾಗಿ ಮತ್ತೆ ತೆರೆಯುತ್ತಿರುವುದು ಶಿವಮೊಗ್ಗ ನಗರದ ನಾಗರಿಕರಿಗೆ ಸಂತಸವನ್ನು ತಂದಿದೆ. ಇದು ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಶಿವಮೊಗ್ಗದ ಪ್ರಜ್ಞಾವಂತ ನಾಗರೀಕರ ಇಚ್ಛಾಶಕ್ತಿಗೆ ಸಿಕ್ಕ ಜಯವಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ನಗರದ ಶಾಂತಿಯುತ ವಾತಾವರಣವನ್ನು ಕಾಯ್ದುಕೊಂಡ ಪ್ರಜ್ಞಾವಂತ ಶಿವಮೊಗ್ಗ ನಾಗರಿಕರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ವಿವಾದನು ಬಗೆಹರಿಸುವಲ್ಲಿ ಯಶಸ್ವಿಯಾದ ಜಿಲ್ಲಾಧಿಕಾರಿಗಳಿಗೆ ಹಾಗೂ ರಕ್ಷಣಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್.ಎನ್ ಚನ್ನಬಸಪ್ಪ (ಚೆನ್ನಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
