ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೂಡ್ಲಿಗಿ ಕ್ಷೇತ್ರದ ಶಾಸಕರು, ಜಿಲ್ಲಾಧಿಕಾರಿಗಳಿಂದ ಪ್ರಶಂಸೆ

ವಿಜಯನಗರ ಜಿಲ್ಲೆಯ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ 600 ಕ್ಕೆ 597 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವಿಜಯನಗರ ಜಿಲ್ಲೆ ಮರಿಯಮ್ಮನಹಳ್ಳಿಯ ಗುಂಡ ಸ್ಟೇಷನ್ ಎಂಬ ಪುಟ್ಟ ಗ್ರಾಮದ “ಸಂಜನಾಬಾಯಿ” ಅವರ ಕುಟುಂಬಕ್ಕೆ ಕೂಡ್ಲಿಗಿ ಕ್ಷೇತ್ರದ ಜನಪ್ರಿಯ ಶಾಸಕರು ಎನ್ ಟಿ ಶ್ರೀನಿವಾಸ್ ಅವರು ಇಂದು ಭೇಟಿ ನೀಡಿ 25,000 ನಗದು ಹಾಗೂ ಲ್ಯಾಪ್‌ಟಾಪ್ ನೀಡಿ, ನಮ್ಮ ಜಿಲ್ಲೆಗೆ ಉತ್ತಮವಾದ ಗೌರವ ತಂದಿದ್ದಾರೆ ಹಾಗೂ ಮುಂದಿನ ವಿದ್ಯಾಭ್ಯಾಸವು ಉತ್ತಮವಾಗಿರಲಿ ಎಂದು ಶುಭ ಹಾರೈಸಿ ಮಾನ್ಯ ಜಿಲ್ಲಾಧಿಕಾರಿಗಳು ಜಿಲ್ಲಾ ಆಡಳಿತದಿಂದ ಸನ್ಮಾನಿಸಿ ಗೌರವಿಸಲಾಯಿತು ಹಾಗೂ ಕೂಡ್ಲಿಗಿ ಕ್ಷೇತ್ರದ ಶಾಸಕರು ಮಾತನಾಡುತ್ತಾ ತಂದೆ ತಾಯಿ ಇಂತಹ ಮಕ್ಕಳನ್ನು ಪಡೆದ ನೀವು ಪುಣ್ಯವಂತರು ಹಾಗೂ ಅವರ ಜೀವನಕ್ಕೆ ಮುಂದಿನ ವಿದ್ಯಾಭ್ಯಾಸಕ್ಕೆ ಯಾವ ತೊಂದರೆ ಆಗದಂತೆ ಅವರಿಗೆ ಶಿಕ್ಷಣ ಸಿಗಲಿ ಹಾಗೂ ಮುಂದೆ ಒಂದಲ್ಲ ಒಂದು ದಿನ ಒಂದು ದೊಡ್ಡ ಸಾಧನೆ ಮಾಡುತ್ತಾರೆ ಅವರಿಗೆ ಯಾವಾಗಲೂ ಶಿಕ್ಷಣದ, ಶಿಕ್ಷಕರ ಜೊತೆ ಪೋಷಕರ ಬೆಂಬಲವಿದ್ದರೆ ಮಕ್ಕಳು ಏನನ್ನಾದರೂ ಸಾಧಿಸಲು ಮುಂದಾಗುತ್ತಾರೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಸ್ಥಳೀಯ ಮುಖಂಡರು, ಯುವಕರು ಉಪಸ್ಥಿತರಿದ್ದರು.

ವರದಿ : ಗುರುರಾಜ್ ಎಲ್, ಕಲ್ಲಹಳ್ಳಿ ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ