ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್ ಸಿ ಗಣತಿಯಲ್ಲಿ ಮಾದಿಗ ಎಂದು ಬರೆಯಿಸಿ: ಹಲಗಿ ಕುರುಕುಂದ

ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಸಮುದಾಯಗಳ ದತ್ತಾಂಶಗಳ ಆಧಾರದ ಮೇಲೆ ರಾಜ್ಯ ಸರ್ಕಾರಗಳೇ ಮೀಸಲಾತಿ ನೀಡಬಹುದು ಎಂದು ಕಳೆದ ಆಗಸ್ಟ್ ಒಂದರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ಮತ್ತಿತರ ರಾಜ್ಯಗಳಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಿದ್ಧತೆ ನಡೆದಿವೆ. ರಾಜ್ಯದಲ್ಲಿ ಒಳಮೀಸಲಾತಿಯ ಅನುಷ್ಠಾನಕ್ಕಾಗಿ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವನ್ನು ನೇಮಕ ಮಾಡಿತ್ತು ಎಂದರು. ನಾವು ಆಂಜನೇಯನ ಗುಡಿಗೂ ಯೇಸುವಿನ ಚರ್ಚೆಗೂ ಗುರುದ್ವಾರಕ್ಕೂ ಹೋಗಿ ಪೂಜಿಸುತ್ತೇವೆ, ಆದರೂ ನಾವು ನಮ್ಮ ಮೂಲ ಜಾತಿ ಮಾದಿಗ ಇರುತ್ತದೆ ಅದಕ್ಕಾಗಿ ಪರಿಶಿಷ್ಟ ಜಾತಿಯ ವಿವಿಧ ಜಾತಿಗಳ ನಿಖರ ಮಾಹಿತಿಗಾಗಿ ಮತ್ತೊಮ್ಮೆ ಜಾತಿ ಗಣತಿ ನಡೆಸುವಂತೆ ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ನೀಡಿದ್ದು ರಾಜ್ಯ ಸರ್ಕಾರ ಒಪ್ಪಿಕೊಂಡು ಜಾತಿ ಗಣತಿ ನಡೆಸಲು ಆದೇಶ ಹೊರಡಿಸಿದೆ. ಮೇ ತಿಂಗಳಲ್ಲಿ ಗಣತಿ ಕಾರ್ಯ ಆರಂಭವಾಗುತ್ತದೆ. ಗಣತಿದಾರರು ಮನೆ ಮನೆಗೂ ಬಂದಾಗ ಆದಿ ಆಂಧ್ರ ಆದಿ ಕರ್ನಾಟಕ ಆದಿ ದ್ರಾವಿಡ ಮತ್ತು ಯೇಸುವನ್ನು ಪೂಜಿಸುವರು ಕ್ರಿಶನ್ ಎಂದು ಬರಿಸಬೇಡಿ ಪರಿಶಿಷ್ಟ ಜಾತಿಯವರು ತಮ್ಮ ಮೂಲ ಜಾತಿ ಮಾದಿಗ ಎಂದು ಬರೆಸಬೇಕು.

ಈ ಬಗ್ಗೆ ನಿರ್ಲಕ್ಷ ಮಾಡದೆ ಕಾಳಜಿ ವಹಿಸಿ ಮಾದಿಗ ಸಮುದಾಯದ ಎಲ್ಲಾ ರಾಜಕೀಯ ವ್ಯಕ್ತಿಗಳು, ಸಂಘಟನೆಯ ಎಲ್ಲಾ ವಿವಿಧ ಪದಾಧಿಕಾರಿಗಳು, ಹಾಲಿ ಹಾಗೂ ಮಾಜಿ ಸಚಿವರು, ಶಾಸಕರು, ನಗರ ಸಭೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಸದಸ್ಯರು, ನಿವೃತ್ತ ಅಧಿಕಾರಿಗಳು, ಹಾಗೂ ಪದವಿ ವಿದ್ಯಾರ್ಥಿಗಳು ಎಲ್ಲರೂ ಸೇರಿ ತಮ್ಮ ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಾಗಿ ಜಾಗೃತಿ ವಹಿಸಬೇಕು. ಗಣತಿದಾರರು ಎಲ್ಲೋ ಒಂದು ಕಡೆ ಕುಳಿತು ಗಣತಿ ಮಾಡಬಾರದು. ಕೆಲವರು ಹೊಟ್ಟೆ ಪಾಡಿಗಾಗಿ ಹಳ್ಳಿಯಿಂದ ಸಿಟಿ ಬೆಂಗಳೂರಿಗೆ ಹೋಗಿರುತ್ತಾರೆ ಅಂತವರನ್ನು ಬಿಡದೆ ಗುರುತಿಸಿ ಮನೆ ಮನೆಗೂ ಭೇಟಿ ನೀಡಿ ನಿಖರವಾದ ಮಾಹಿತಿ ಸಂಗ್ರಹಿಸುವಂತೆ ನಿಗಾವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಎಸ್ ಸಿ ವಿಭಾಗ ಸಂ.ಕಾರ್ಯದರ್ಶಿ, ಮಲ್ಲು ಹಲಗಿ ಕುರಕುಂದ ಅವರು ಮನವಿ ಮಾಡಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ