ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಛತ್ರ ವೀರಾಂಜನೇಯ ಸ್ವಾಮಿಯ ರಥೋತ್ಸವ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಸಮೀಪದ ಹೊಸ ನೆಲ್ಲೂಡಿ ಗ್ರಾಮದಲ್ಲಿ ದವನದ ಹುಣ್ಣಿಮೆ ಪ್ರಯುಕ್ತ ಶ್ರೀ ಛತ್ರ ವೀರಾಂಜನೇಯ ಸ್ವಾಮಿಯ ಉಚ್ಚಯ್ಯ ರಥೋತ್ಸವವು ಶನಿವಾರ ಸಂಜೆ ಜರುಗಿತು.

ಈ ಸಂದರ್ಭದಲ್ಲಿ ಛತ್ರ ವೀರಾಂಜನೇಯ ಸ್ವಾಮಿಯ ಪುರೋಹಿತರು ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ದವನದ ಹುಣ್ಣಿಮೆ ಪ್ರಯುಕ್ತ ಶ್ರೀ ಛತ್ರ ವೀರಾಂಜನೇಯ ಸ್ವಾಮಿಯ ರಥೋತ್ಸವವು ಸಕಲ ಸದ್ಬಕ್ತರಿಂದ ಸೇರಿ ಸಂಭ್ರಮದಿಂದ ಆಚರಿಸಲಾಯಿತು, ಬೆಳಿಗ್ಗೆ ಛತ್ರ ವೀರಾಂಜನೇಯ ಸ್ವಾಮಿಯ ದೇವಸ್ಥಾನದಲ್ಲಿ ಅಭಿಷೇಕ ಹಾಗೂ ಸಕಲ ಪೂಜೆಗಳೊಂದಿಗೆ ಸ್ವಾಮಿಯನ್ನು ಅದ್ಭುತವಾಗಿ ಹೂವು, ಹಣ್ಣು-ಹಂಪಲುಗಳಿಂದ ಸುಂದರವಾಗಿ ಅಲಂಕರಿಸಲಾಯಿತು.

ಸಂಜೆ ರಥೋತ್ಸವ ಕಾರ್ಯಕ್ರಮದ ಅಂಗವಾಗಿ ಊರಿನ ಹಿರಿಯರು ಮತ್ತು ಯುವಕರ ಕೋಲಾಟ ಪ್ರದರ್ಶನ ಗಮನಾರ್ಹವಾಗಿತ್ತು. ಊರಿನ ಸರ್ವ ಸದ್ಬಕ್ತರು ಸೇರಿ ಸಡಗರ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ಈ ರಥೋತ್ಸವ ನೆರವೇರಿಸಿದ ನಂತರ ಊರಿನ ಹಾಗೂ ಸುತ್ತ-ಮುತ್ತಲ ಗ್ರಾಮಗಳಿಂದ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಸ್ವಾಮಿಯ ಪ್ರಸಾದವನ್ನು ನೀಡಲಾಯಿತು ಎಂದರು.

ಈ ಸಂದರ್ಭದಲ್ಲಿ ಹೊಸ ನೆಲ್ಲುಡಿ, ಕೊಟ್ಟಾಲ್, ಶಾಂತಿ ನಗರ, ಶಂಕರ ಸಿಂಗ್ ಕ್ಯಾಂಪ್, ಸೇರಿದಂತೆ ಊರಿನ ಮುಖಂಡರು, ಹಿರಿಯರು, ಕಿರಿಯರು, ಯುವಕರು, ಉಪಸ್ಥಿತರಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ